8:41 PM Wednesday16 - September 2026
ಬ್ರೇಕಿಂಗ್ ನ್ಯೂಸ್
ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ…

ಇತ್ತೀಚಿನ ಸುದ್ದಿ

ಮುಸ್ಲಿಂ ಬಾಂಧವ್ಯ ವೇದಿಕೆಯ ಆಶ್ರಯದಲ್ಲಿ ಅಲ್ಪಸಂಖ್ಯಾತ ಹಕ್ಕುಗಳ ಮಾಹಿತಿ ಶಿಬಿರ

21/02/2023, 11:57

ಮಂಗಳೂರು(reporterkarnataka.com): ಅಲ್ಪಸಂಖ್ಯಾತರ ಪ್ರಜಾಸತ್ತಾತ್ಮಕ ಮತ್ತು ರಾಜಕೀಯ ಬಲವರ್ಧನೆಯ ಬಗ್ಗೆ ಫಾರಂ ಫಾರ್ ಮೈನಾರಿಟಿ ರೈಟ್ಸ್ , ಡೆಮಾಕ್ರಟಿಕ್ ಆ್ಯಂಡ್ ಪೊಲಿಟಿಕಲ್ ಎಂಪವರ್ ಮೆಂಟ್ ಬೆಂಗಳೂರು ಮತ್ತು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇವರ ಆಶ್ರಯದಲ್ಲಿ ನಗರದ ಹಂಪನಕಟ್ಟೆಯ ಆಶೀರ್ವಾದ್ ಹಾಲ್ ನಲ್ಲಿ ಅಲ್ಪಸಂಖ್ಯಾತರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಅಧ್ಯಕ್ಷತೆ ವಹಿಸಿದ ಫಾರಂ ಫಾರ್ ಮೈನಾರಿಟಿ ಇದರ ಅಧ್ಯಕ್ಷ ಮೆಹರೋಜ್ ಖಾನ್ ” ಅಲ್ಪಸಂಖ್ಯಾತರು ದೇಶದ ರಾಜಕಾರಣದಲ್ಲಿ ಮತ್ತು ಸಾಮಾಜಿಕ ವ್ಯವಸ್ಥೆಯಲ್ಲಿ ಕ್ರಿಯಾಶೀಲ ಭೂಮಿಕೆ ನಿಭಾಯಿಸಬೇಕು. ರಾಜಕೀಯ ಕಾರಣದಿಂದ ಸಮಾಜದಲ್ಲಿ ಸೃಷ್ಟಿಯಾಗಿರುವ ಅನಗತ್ಯ ಅಂತರವನ್ನು ನಿವಾರಿಸಲು ಬಹುಸಂಖ್ಯಾತ ಸಮುದಾಯದೊಂದಿಗೆ ಸೌಹಾರ್ದ ಸ್ಥಾಪಿಸುವ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ರಾಜಕಾರಣಿಗಳ ಕೋಮು ಧ್ರುವೀಕರಣದ ರಾಜಕೀಯವನ್ನು ವಿಫಲಗೊಳಿಸಬೇಕು” ಎಂದು ಹೇಳಿದರು.

ಮುಸ್ಲಿಂ ಬಾಂಧವ್ಯ ವೇದಿಕೆಯ ಅಧ್ಯಕ್ಷ ಯಾಸೀನ್ ಶಿರೂರ್ ಮಾತನಾಡಿ” ನಾಡಿನ ಸಾಮರಸ್ಯ ಮತ್ತು ಶಾಂತಿಗಾಗಿ ವೇದಿಕೆ ನಿರಂತರ ಶ್ರಮಿಸಲಿದೆ. ಸಮುದಾಯಗಳ ನಡುವೆ ಕಾಲಕಾಲಕ್ಕೆ ಮೂಡುವ ಅಪನಂಬಿಕೆಯನ್ನು ಹೋಗಲಾಡಿಸುವ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚಿದೆ. ಮುಸ್ಲಿಂ ಬಾಂಧವ್ಯ ವೇದಿಕೆಯು ಲೇಖಕರು ಚಿಂತಕರು ಸಾಹಿತಿಗಳ ವೇದಿಕೆಯಾಗಿರುವುದು ಮಾತ್ರವಲ್ಲ ಕರ್ನಾಟಕದಲ್ಲಿ ಈ ಸ್ವರೂಪದ ಪ್ರಪ್ರಥಮ ವೇದಿಕೆಯಾಗಿದ್ದು ಮುಂಬರುವ ದಿನಗಳಲ್ಲಿ ಸಮಾಜದಲ್ಲಿ ಬಹಳ ಕ್ರಿಯಾಶೀಲ ಭೂಮಿಕೆ ನಿಭಾಯಿಸಲಿದೆ” ಎಂದು ಹೇಳಿದರು. ಮಾಹಿತಿ ಶಿಬಿರದಲ್ಲಿ ಸುರತ್ಕಲ್ ಮಾಜಿ ಶಾಸಕ ಮೊಯಿದ್ದೀನ್ ಬಾವ, ಮಾಜಿ ಮೇಯರ್ ಅಶ್ರಫ್, ಉಡುಪಿಯ ಅಲ್ ಇಬಾದ ಶಿಕ್ಷಣ ಸಂಸ್ಥೆಯ ನಿರ್ದೇಶಕ ಅಬ್ದುಲ್ ಲತೀಫ್ ಮದನಿ, ಬಾಂಧವ್ಯ ವೇದಿಕೆಯ ಕಾರ್ಯದರ್ಶಿ ನಿಸಾರ್ ಆಹಮದ್, ಉಮರ್ ಕುಂಇ್ ಸಾಲೆತ್ತೂರ್, ಹಬೀಬ್ ಖಾದರ್, ಶರ್ಫುದ್ದೀನ್ ಕಾಪು, ಮುಬೀನ್ ಸುಳ್ಯ, ಶಬೀರ್ ಆಹ್ಮದ್, ಆರ್ ಎ ಲೋಹಾನಿ, ಎ ಕೆ ಕುಕ್ಕಿಲ,ಅಶ್ರಫ್ ಕುಂದಾಪುರ, ಇಖ್ಬಾಲ್ ಹಾಲಾಡಿ, ರಶೀದ್ ಊಬರ್, ಅಜೀಜ್ ಆಹ್ಮದ್ ಉಡುಪಿ, ಯು ಟಿ ಇರ್ಷಾದ್, ಸೈಫ್ ಬಜಪೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು