1:52 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ರಸ್ತೆ ಮಧ್ಯದಲ್ಲೇ ಆಟೋ ಚಾಲಕನ ಯು ಟರ್ನ್: ಹೆಲ್ಮೆಟ್ ಧರಿಸದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

21/02/2023, 19:33

ಮಂಗಳೂರು(reporterkarnataka.com): ಆಟೋ ಚಾಲಕನ ನಿರ್ಲಕ್ಷ್ಯದ ಚಾಲನೆ ಹಾಗೂ ಹೆಲ್ಮೆಟ್ ರಹಿತ ಪ್ರಯಾಣದಿಂದ ಯುವಕನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದ ಹೃದಯ ವಿದ್ರಾವಕ ಘಟನೆ ನಗರದ ಬಿಜೈನಲ್ಲಿ ನಡೆಯಿತು.

ಪಾದಚಾರಿಗಳು, ದಾರಿ ಹೋಕರು ನೋಡು ನೋಡುತ್ತಿದ್ದಂತೆ ಈ ಘೋರ ದುರಂತ ನಡೆದೇ ಹೋಯಿತು.ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಬೈಕ್ ಸವಾರ ಹೆಲ್ಮೆಟ್ ಹಾಕದಿರುವುದು ಅಪಘಾತಕ್ಕೆ ಕಾರಣ ಸವಾರ ಕವನ್ ಆಳ್ವ(20) ಪ್ರಾಣ ಕಳೆದುಕೊಳ್ಳುವಂತಾಯಿತು.

ಬಿಜೈ ಚರ್ಚ್ ಹಾಲ್ ಮುಂಭಾಗದ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು ಆಟೋ ಚಾಲಕ ನಿರ್ಲಕ್ಷ್ಯದಿಂದ ರಸ್ತೆ ಮಧ್ಯದಿಂದಲೇ ಯು ಟರ್ನ್ ತಿರುವು ತೆಗೆದುಕೊಂಡಿದ್ದ. ಮುಂದಿನಿಂದ ಬರುತ್ತಿದ್ದ ಬೈಕ್ ಸವಾರ ಆಯತಪ್ಪಿ ರಿಕ್ಷಾಗೆ ಡಿಕ್ಕಿಯಾಗಿದ್ದು ರಸ್ತೆ ಬದಿಯ ಮರಕ್ಕೆ ಹೋಗಿ ಬಡಿದಿದ್ದಾನೆ. ತಲೆಯ ಭಾಗ ನೇರವಾಗಿ ಮರಕ್ಕೆ ಬಡಿದಿದ್ದರಿಂದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಿಜೈ ನಿವಾಸಿಯಾಗಿದ್ದು ನಗರದ ಎಸ್.ಡಿ.ಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಕವನ್ ಆಳ್ವ(20) ಮೃತ ಯುವಕ. ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲೆಟ್ ಇಲ್ಲದೆ ದ್ವಿಚಕ್ರ ವಾಹನ ಚಾಲನೆಯ ಪರಿಣಾಮ ಯುವಕ ಸಾವು ಕಂಡಿದ್ದಾನೆ. ಕದ್ರಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು