12:29 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಸಮಾಜದ ಕಟ್ಟ ಕಡೆಯರಿಗೂ ನಾಗರಿಕ ಸೌಲಭ್ಯ ಕಲ್ಪಿಸುವ ಗುರಿ ಪ್ರಧಾನಿ ಮೋದಿ ಅವರದ್ದು: ಸಚಿವ ಅಶ್ವಥ್ ನಾರಾಯಣ್

21/02/2023, 20:53

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಮಾಜದ ಕಟ್ಟ ಕಡೆಯವರಿಗೂ ನಾಗರೀಕ ಸೌಲಭ್ಯ ದೊರಕುವಂತೆ ದೂರದೃಷ್ಟಿಯ ಯೋಜನೆ, ಜಾರಿಗೊಳಿಸಿದ ಏಕೈಕ ವ್ಯಕ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಎಂದು ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ಹೇಳಿದರು.

ಅವರು ನಾಗಮಂಗಲ ತಾಲೂಕು ಭಾರತೀಯ ಜನತಾ ಪಾರ್ಟಿ ಆಯೋಜನೆ ಮಾಡಿದ್ದ ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿ ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಚಿಂತನೆ ಸಾಧನೆ ಸೇವೆಗಳು ಗುಜರಾತ್ ಮುಖ್ಯಮಂತ್ರಿ ಆಗಿ ಜನಪರ ಕಾಳಜಿ ಅಂದಿನ ಯೋಜನೆ ಇಂದು ಇಡೀ ದೇಶವ್ಯಾಪಿ ಪ್ರಧಾನಮಂತ್ರಿಯಾಗಿ ಅವರ ದೂರದೃಷ್ಟಿಯ ಅಭಿವೃದ್ಧಿ ಯೋಜನೆ ಜಾರಿಗೆ ತಂದಿರುವುದು ಅವರ ಅಭಿವೃದ್ಧಿ ಚಿಂತನೆಗೆ ಸಾಕ್ಷಿ ಭೂತವಾಗಿದೆ.

ಪ್ರತಿ ಮನೆಮನೆಗೂ ಕುಡಿಯುವ ನೀರಿನ ಜಲಜೀವನ್ ಮಿಷನ್ ಇಂದು ನಾಗಮಂಗಲ ತಾಲೂಕಿನ ಜನತೆಗೆ ದೊರಕಿರುವ ಬೃಹತ್ ಕುಡಿಯುವ ನೀರಿನ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ, ನಿರೀಕ್ಷಿತ ಮಟ್ಟದಲ್ಲಿ ಕಟ್ಟಕಡೆಯ ಭಾಗಕ್ಕೂ ನೀಡುವ ಕೆಲಸವಾಗಿದೆ.
ವಿಶ್ವದ ತಂತ್ರಜ್ಞಾನ ಮಾದರಿ ಅಂತರಾಷ್ಟ್ರೀಯ ಮಟ್ಟದಲ್ಲಿ ದೊರಕುವಂತಹ ಸೌಲಭ್ಯಗಳು ಭಾರತ ತನ್ನ ಕೌಶಲ್ಯಾಭಿವೃದ್ಧಿ ಯೋಜನೆಗೆ ಮೋದಿಯವರು ನೀಡಿರುವ ಅನೇಕ ಕೆಲಸಗಳು ನಮ್ಮ ಮುಂದಿವೆ ಎಂದು ತಿಳಿಸಿದರು.
ಮುಂದುವರೆದ ದೇಶಗಳಲ್ಲಿ ಸಾಧನೆ ಆಗದೆ ಇದ್ದಂತಹ ಕೆಲಸಗಳನ್ನು ನರೇಂದ್ರ ಮೋದಿಜಿ ಅವರು ಅಭಿವೃದ್ಧಿಯ ಪಥವನ್ನು ಮುನ್ನಡೆಸಿದ್ದಾರೆ.
ಈ ಬಾರಿ ನಿಮ್ಮ ನಡೆ ನಮ್ಮೆಲ್ಲರ ಸಹಕಾರ ಭಾರತೀಯ ಜನತಾ ಪಾರ್ಟಿಯ ಬೆಂಬಲಿಸುವ ಮುಖಾಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬೆಂಬಲಿಸಬೇಕೆಂದು ತಿಳಿಸಿದರು.

ಸಮಾರಂಭದಲ್ಲಿ ರಾಜ್ಯ ಹಿರಿಯ ಬಿಜೆಪಿ ಉಪಾಧ್ಯಕ್ಷರಾದ ನಿರ್ಮಲ್ ಕುಮಾರಸುರಾನ. ಮಾರುತಿರಾವ್. ಪವರ್ ಜಿಲ್ಲಾಧ್ಯಕ್ಷರಾದ ಉಮೇಶ್ ರವರುಗಳು ಮಾತನಾಡಿದರು.

ಸಮಾರಂಭದಲ್ಲಿ ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ್ ಫೈಟರ್ ರವಿ ಅಧ್ಯಕ್ಷರಾದ ಗೀತಾ ವಿವೇಕಾನಂದ ಹಾಗೂ ಬಿಜೆಪಿ ಮುಖಂಡರಾದ ವಿಷ್ಣುಮೂರ್ತಿ ಭಟ್ ರವರು ಹಾಗೂ ಮಹಿಳಾ ಮುಖಂಡರು ಹಾಗೂ ಅನೇಕ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು