1:52 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಮಾಜದ ಕಟ್ಟ ಕಡೆಯರಿಗೂ ನಾಗರಿಕ ಸೌಲಭ್ಯ ಕಲ್ಪಿಸುವ ಗುರಿ ಪ್ರಧಾನಿ ಮೋದಿ ಅವರದ್ದು: ಸಚಿವ ಅಶ್ವಥ್ ನಾರಾಯಣ್

21/02/2023, 20:53

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಮಾಜದ ಕಟ್ಟ ಕಡೆಯವರಿಗೂ ನಾಗರೀಕ ಸೌಲಭ್ಯ ದೊರಕುವಂತೆ ದೂರದೃಷ್ಟಿಯ ಯೋಜನೆ, ಜಾರಿಗೊಳಿಸಿದ ಏಕೈಕ ವ್ಯಕ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಎಂದು ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ಹೇಳಿದರು.

ಅವರು ನಾಗಮಂಗಲ ತಾಲೂಕು ಭಾರತೀಯ ಜನತಾ ಪಾರ್ಟಿ ಆಯೋಜನೆ ಮಾಡಿದ್ದ ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿ ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಚಿಂತನೆ ಸಾಧನೆ ಸೇವೆಗಳು ಗುಜರಾತ್ ಮುಖ್ಯಮಂತ್ರಿ ಆಗಿ ಜನಪರ ಕಾಳಜಿ ಅಂದಿನ ಯೋಜನೆ ಇಂದು ಇಡೀ ದೇಶವ್ಯಾಪಿ ಪ್ರಧಾನಮಂತ್ರಿಯಾಗಿ ಅವರ ದೂರದೃಷ್ಟಿಯ ಅಭಿವೃದ್ಧಿ ಯೋಜನೆ ಜಾರಿಗೆ ತಂದಿರುವುದು ಅವರ ಅಭಿವೃದ್ಧಿ ಚಿಂತನೆಗೆ ಸಾಕ್ಷಿ ಭೂತವಾಗಿದೆ.

ಪ್ರತಿ ಮನೆಮನೆಗೂ ಕುಡಿಯುವ ನೀರಿನ ಜಲಜೀವನ್ ಮಿಷನ್ ಇಂದು ನಾಗಮಂಗಲ ತಾಲೂಕಿನ ಜನತೆಗೆ ದೊರಕಿರುವ ಬೃಹತ್ ಕುಡಿಯುವ ನೀರಿನ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ, ನಿರೀಕ್ಷಿತ ಮಟ್ಟದಲ್ಲಿ ಕಟ್ಟಕಡೆಯ ಭಾಗಕ್ಕೂ ನೀಡುವ ಕೆಲಸವಾಗಿದೆ.
ವಿಶ್ವದ ತಂತ್ರಜ್ಞಾನ ಮಾದರಿ ಅಂತರಾಷ್ಟ್ರೀಯ ಮಟ್ಟದಲ್ಲಿ ದೊರಕುವಂತಹ ಸೌಲಭ್ಯಗಳು ಭಾರತ ತನ್ನ ಕೌಶಲ್ಯಾಭಿವೃದ್ಧಿ ಯೋಜನೆಗೆ ಮೋದಿಯವರು ನೀಡಿರುವ ಅನೇಕ ಕೆಲಸಗಳು ನಮ್ಮ ಮುಂದಿವೆ ಎಂದು ತಿಳಿಸಿದರು.
ಮುಂದುವರೆದ ದೇಶಗಳಲ್ಲಿ ಸಾಧನೆ ಆಗದೆ ಇದ್ದಂತಹ ಕೆಲಸಗಳನ್ನು ನರೇಂದ್ರ ಮೋದಿಜಿ ಅವರು ಅಭಿವೃದ್ಧಿಯ ಪಥವನ್ನು ಮುನ್ನಡೆಸಿದ್ದಾರೆ.
ಈ ಬಾರಿ ನಿಮ್ಮ ನಡೆ ನಮ್ಮೆಲ್ಲರ ಸಹಕಾರ ಭಾರತೀಯ ಜನತಾ ಪಾರ್ಟಿಯ ಬೆಂಬಲಿಸುವ ಮುಖಾಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬೆಂಬಲಿಸಬೇಕೆಂದು ತಿಳಿಸಿದರು.

ಸಮಾರಂಭದಲ್ಲಿ ರಾಜ್ಯ ಹಿರಿಯ ಬಿಜೆಪಿ ಉಪಾಧ್ಯಕ್ಷರಾದ ನಿರ್ಮಲ್ ಕುಮಾರಸುರಾನ. ಮಾರುತಿರಾವ್. ಪವರ್ ಜಿಲ್ಲಾಧ್ಯಕ್ಷರಾದ ಉಮೇಶ್ ರವರುಗಳು ಮಾತನಾಡಿದರು.

ಸಮಾರಂಭದಲ್ಲಿ ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ್ ಫೈಟರ್ ರವಿ ಅಧ್ಯಕ್ಷರಾದ ಗೀತಾ ವಿವೇಕಾನಂದ ಹಾಗೂ ಬಿಜೆಪಿ ಮುಖಂಡರಾದ ವಿಷ್ಣುಮೂರ್ತಿ ಭಟ್ ರವರು ಹಾಗೂ ಮಹಿಳಾ ಮುಖಂಡರು ಹಾಗೂ ಅನೇಕ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು