5:04 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಸಮಾಜದ ಕಟ್ಟ ಕಡೆಯರಿಗೂ ನಾಗರಿಕ ಸೌಲಭ್ಯ ಕಲ್ಪಿಸುವ ಗುರಿ ಪ್ರಧಾನಿ ಮೋದಿ ಅವರದ್ದು: ಸಚಿವ ಅಶ್ವಥ್ ನಾರಾಯಣ್

21/02/2023, 20:53

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಮಾಜದ ಕಟ್ಟ ಕಡೆಯವರಿಗೂ ನಾಗರೀಕ ಸೌಲಭ್ಯ ದೊರಕುವಂತೆ ದೂರದೃಷ್ಟಿಯ ಯೋಜನೆ, ಜಾರಿಗೊಳಿಸಿದ ಏಕೈಕ ವ್ಯಕ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಎಂದು ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ಹೇಳಿದರು.

ಅವರು ನಾಗಮಂಗಲ ತಾಲೂಕು ಭಾರತೀಯ ಜನತಾ ಪಾರ್ಟಿ ಆಯೋಜನೆ ಮಾಡಿದ್ದ ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿ ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಚಿಂತನೆ ಸಾಧನೆ ಸೇವೆಗಳು ಗುಜರಾತ್ ಮುಖ್ಯಮಂತ್ರಿ ಆಗಿ ಜನಪರ ಕಾಳಜಿ ಅಂದಿನ ಯೋಜನೆ ಇಂದು ಇಡೀ ದೇಶವ್ಯಾಪಿ ಪ್ರಧಾನಮಂತ್ರಿಯಾಗಿ ಅವರ ದೂರದೃಷ್ಟಿಯ ಅಭಿವೃದ್ಧಿ ಯೋಜನೆ ಜಾರಿಗೆ ತಂದಿರುವುದು ಅವರ ಅಭಿವೃದ್ಧಿ ಚಿಂತನೆಗೆ ಸಾಕ್ಷಿ ಭೂತವಾಗಿದೆ.

ಪ್ರತಿ ಮನೆಮನೆಗೂ ಕುಡಿಯುವ ನೀರಿನ ಜಲಜೀವನ್ ಮಿಷನ್ ಇಂದು ನಾಗಮಂಗಲ ತಾಲೂಕಿನ ಜನತೆಗೆ ದೊರಕಿರುವ ಬೃಹತ್ ಕುಡಿಯುವ ನೀರಿನ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ, ನಿರೀಕ್ಷಿತ ಮಟ್ಟದಲ್ಲಿ ಕಟ್ಟಕಡೆಯ ಭಾಗಕ್ಕೂ ನೀಡುವ ಕೆಲಸವಾಗಿದೆ.
ವಿಶ್ವದ ತಂತ್ರಜ್ಞಾನ ಮಾದರಿ ಅಂತರಾಷ್ಟ್ರೀಯ ಮಟ್ಟದಲ್ಲಿ ದೊರಕುವಂತಹ ಸೌಲಭ್ಯಗಳು ಭಾರತ ತನ್ನ ಕೌಶಲ್ಯಾಭಿವೃದ್ಧಿ ಯೋಜನೆಗೆ ಮೋದಿಯವರು ನೀಡಿರುವ ಅನೇಕ ಕೆಲಸಗಳು ನಮ್ಮ ಮುಂದಿವೆ ಎಂದು ತಿಳಿಸಿದರು.
ಮುಂದುವರೆದ ದೇಶಗಳಲ್ಲಿ ಸಾಧನೆ ಆಗದೆ ಇದ್ದಂತಹ ಕೆಲಸಗಳನ್ನು ನರೇಂದ್ರ ಮೋದಿಜಿ ಅವರು ಅಭಿವೃದ್ಧಿಯ ಪಥವನ್ನು ಮುನ್ನಡೆಸಿದ್ದಾರೆ.
ಈ ಬಾರಿ ನಿಮ್ಮ ನಡೆ ನಮ್ಮೆಲ್ಲರ ಸಹಕಾರ ಭಾರತೀಯ ಜನತಾ ಪಾರ್ಟಿಯ ಬೆಂಬಲಿಸುವ ಮುಖಾಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬೆಂಬಲಿಸಬೇಕೆಂದು ತಿಳಿಸಿದರು.

ಸಮಾರಂಭದಲ್ಲಿ ರಾಜ್ಯ ಹಿರಿಯ ಬಿಜೆಪಿ ಉಪಾಧ್ಯಕ್ಷರಾದ ನಿರ್ಮಲ್ ಕುಮಾರಸುರಾನ. ಮಾರುತಿರಾವ್. ಪವರ್ ಜಿಲ್ಲಾಧ್ಯಕ್ಷರಾದ ಉಮೇಶ್ ರವರುಗಳು ಮಾತನಾಡಿದರು.

ಸಮಾರಂಭದಲ್ಲಿ ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ್ ಫೈಟರ್ ರವಿ ಅಧ್ಯಕ್ಷರಾದ ಗೀತಾ ವಿವೇಕಾನಂದ ಹಾಗೂ ಬಿಜೆಪಿ ಮುಖಂಡರಾದ ವಿಷ್ಣುಮೂರ್ತಿ ಭಟ್ ರವರು ಹಾಗೂ ಮಹಿಳಾ ಮುಖಂಡರು ಹಾಗೂ ಅನೇಕ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು