10:00 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಜೆಡಿಎಸ್ ಸಭೆಗೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರಿಗೆ ಆಹ್ವಾನ ಇಲ್ಲ: ಪಕ್ಷದೊಳಗೆ ಅಸಮಾಧಾನದ ಹೊಗೆ

22/02/2023, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೆಡಿಎಸ್ ಪಕ್ಷದ ಪಂಚರತ್ನ ಕಾರ್ಯಕ್ರಮದ ಅಂಗವಾಗಿ ಕೊಟ್ಟಿಗೆಹಾರದಲ್ಲಿ ನಡೆದ ಬಣಕಲ್ ಹೋಬಳಿ ಘಟಕದ ಸಭೆಗೆ ಸ್ಥಳೀಯ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತರನ್ನು ಕರೆಯದೇ ಸಭೆ ನಡೆಸಿರುವುದರಿಂದ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದೆ ಎಂದು ಜೆಡಿಎಸ್ ಮುಖಂಡ ತನು ಕೊಟ್ಟಿಗೆಹಾರ ತಿಳಿಸಿದ್ದಾರೆ.
ಕೊಟ್ಟಿಗೆಹಾರದಲ್ಲಿ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ತಿಳಿಸಿರುವ ಅವರು ‘ಜೆಡಿಎಸ್ ಪಕ್ಷಕ್ಕೆ ಹಲವು ವರ್ಷಗಳಿಂದ ಗುರುತಿಸಿಕೊಂಡು ಕಾರ್ಯ ನಿರ್ವಹಿಸುತ್ತಾ ಪಕ್ಷದ ಮೇಲೆ ಅಭಿಮಾನ ಇಟ್ಟು ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಿದ್ದೇವೆ.

ಆದರೆ ಮಾರ್ಚ್ 1 ರಂದು ಮೂಡಿಗೆರೆಯಲ್ಲಿ ನಡೆಯುವ ಪಂಚರತ್ನ ಕಾರ್ಯಕ್ರಮಕ್ಕೆ ಹೋಬಳಿ ಘಟಕದಿಂದ ಕೊಟ್ಟಿಗೆಹಾರದ ನಿಸರ್ಗ ಗ್ರ್ಯಾಂಡ್ ಹೊಟೇಲ್ ನಲ್ಲಿ ಮಂಗಳವಾರ ಮುಖಂಡರು ಸಭೆ ಏರ್ಪಡಿಸಿ ಸ್ಥಳೀಯ ಮುಖಂಡ ಹಾಗೂ ಕಾರ್ಯಕರ್ತರನ್ನು ಕರೆಯದೇ ಕಡೆಗಣಿಸಿರುವುದು ಮನಸ್ಸಿಗೆ ತುಂಬಾ ಬೇಸರ ತಂದಿದೆ. ಪಕ್ಷಕ್ಕೆ ಈಚೆಗೆ ಸೇರಿದವರನ್ನು ಕರೆದು ಹಿಂದಿನಿಂದಲೂ ಪಕ್ಷಕ್ಕೆ ದುಡಿದ ಸ್ಥಳೀಯ ಮುಖಂಡ ಹಾಗೂ ಕಾರ್ಯಕರ್ತರ ಕಡೆಗಣನೆ ಪಕ್ಷದಲ್ಲಿ ಅಸಮಾಧಾನ ತರಲು ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು