11:56 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಶಾರ್ಜಾದಲ್ಲಿ ಅಂತಾರಾಷ್ಟೀಯ ಪ್ಯಾರಾ ಅಥ್ಲೆಟಿಕ್: ಚಿಕ್ಕಮಗಳೂರಿನ ರಾಧಾಗೆ ಚಿನ್ನ, ರಕ್ಷಿತಾ ರಾಜುಗೆ ಬೆಳ್ಳಿ

23/02/2023, 19:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದುಬೈಯ ಶಾರ್ಜಾದಲ್ಲಿ ಬುಧವಾರ ನಡೆದ ಅಂತರಾಷ್ಟ್ರೀಯ ಪ್ಯಾರಾ ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರಿನ ಆಶಾ ಕಿರಣ ಅಂಧ ಶಾಲೆಯ ವಿದ್ಯಾರ್ಥಿನಿಯರಾದ ರಾಧಾ ವೆಂಕಟೇಶ್ ಪ್ರಥಮ ಹಾಗೂ ರಕ್ಷಿತಾರಾಜು ದ್ವಿತೀಯ ಸ್ಥಾನ ಪಡೆದು ಅಕ್ಟೋಬರ್ ನಲ್ಲಿ ಚೀನಾದಲ್ಲಿ ನಡೆಯುವ ಪ್ಯಾರಾ ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಸಾಯಿ ಕ್ರೀಡಾ ಹಾಸ್ಟೆಲ್ ನಲ್ಲಿ ಕ್ರೀಡಾಭ್ಯಾಸ ಮಾಡುತ್ತಿರುವ ಈ ಇಬ್ಬರು ವಿದ್ಯಾರ್ಥಿನಿಯರು ಕೋಚ್ ರಾಹುಲ್ ಬಾಲಕೃಷ್ಣ, ಗೋವಿಂದ್, ಸೌಮ್ಯ ಸಾವಂತ್,ಗೈಡ್ ರನ್ನರ್ ತಬರೇಶ್ ಗರಡಿಯಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡುತ್ತಿದ್ದು ಕಳೆದ ಬಾರಿ ದೆಹಲಿಯಲ್ಲಿ ನಡೆದ 400ಮೀ,800ಮೀ ಹಾಗೂ 1500ಮೀ ಓಟದಲ್ಲಿ ಚಿನ್ನದ ಪದಕ ಪಡೆದಿದ್ದರು. ಬುಧವಾರ ಶಾರ್ಜಾದಲ್ಲಿ ನಡೆದ ಅಂತರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಮೀಟ್ ನಲ್ಲಿ ಟಿ12 ವಿಭಾಗದ ಕ್ರೀಡಾಕೂಟದ 1500 ಮೀ ಓಟದಲ್ಲಿ ರಾಧಾವೆಂಕಟೇಶ್ 5:16,77 ನಿಮಿಷದಲ್ಲಿ ಕ್ರಮಿಸಿ ಚಿನ್ನದ ಪದಕ ಪಡೆದಿದ್ದಾರೆ.ಟಿ11 ವಿಭಾಗದ 1500ಮೀ ಓಟದಲ್ಲಿ ರಕ್ಷಿತಾರಾಜು 5:44,67ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬೆಳ್ಳಿ ಪದಕ ಪಡೆದು ಜಿಲ್ಲೆಗೆ ಮಾತ್ರವಲ್ಲದೇ ರಾಜ್ಯಕ್ಕೂ ಕೀರ್ತಿ ತಂದಿದ್ದಾರೆ.ರಾಧಾ ವೆಂಕಟೇಶ್ ಮೂಲತ: ಚಿತ್ರದುರ್ಗದ ಹೊಳಲ್ಕೆರೆ ಯವರಾಗಿದ್ದು,ರಕ್ಷಿತಾ ರಾಜು ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಗುಡ್ನಳ್ಳಿ ಗ್ರಾಮದವರಾಗಿದ್ದಾರೆ. ಇವರ ಸಾಧನೆಗೆ ಆಶಾ ಕಿರಣ ಶಾಲೆಯ ಆಡಳಿತ ವರ್ಗ ಹಾಗೂ ಸಿಬ್ಬಂದಿ ವರ್ಗ ಹಾಗೂ ಕ್ರೀಡಾಭಿಮಾನಿಗಳು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು