2:56 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಶಾರ್ಜಾದಲ್ಲಿ ಅಂತಾರಾಷ್ಟೀಯ ಪ್ಯಾರಾ ಅಥ್ಲೆಟಿಕ್: ಚಿಕ್ಕಮಗಳೂರಿನ ರಾಧಾಗೆ ಚಿನ್ನ, ರಕ್ಷಿತಾ ರಾಜುಗೆ ಬೆಳ್ಳಿ

23/02/2023, 19:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದುಬೈಯ ಶಾರ್ಜಾದಲ್ಲಿ ಬುಧವಾರ ನಡೆದ ಅಂತರಾಷ್ಟ್ರೀಯ ಪ್ಯಾರಾ ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರಿನ ಆಶಾ ಕಿರಣ ಅಂಧ ಶಾಲೆಯ ವಿದ್ಯಾರ್ಥಿನಿಯರಾದ ರಾಧಾ ವೆಂಕಟೇಶ್ ಪ್ರಥಮ ಹಾಗೂ ರಕ್ಷಿತಾರಾಜು ದ್ವಿತೀಯ ಸ್ಥಾನ ಪಡೆದು ಅಕ್ಟೋಬರ್ ನಲ್ಲಿ ಚೀನಾದಲ್ಲಿ ನಡೆಯುವ ಪ್ಯಾರಾ ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಸಾಯಿ ಕ್ರೀಡಾ ಹಾಸ್ಟೆಲ್ ನಲ್ಲಿ ಕ್ರೀಡಾಭ್ಯಾಸ ಮಾಡುತ್ತಿರುವ ಈ ಇಬ್ಬರು ವಿದ್ಯಾರ್ಥಿನಿಯರು ಕೋಚ್ ರಾಹುಲ್ ಬಾಲಕೃಷ್ಣ, ಗೋವಿಂದ್, ಸೌಮ್ಯ ಸಾವಂತ್,ಗೈಡ್ ರನ್ನರ್ ತಬರೇಶ್ ಗರಡಿಯಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡುತ್ತಿದ್ದು ಕಳೆದ ಬಾರಿ ದೆಹಲಿಯಲ್ಲಿ ನಡೆದ 400ಮೀ,800ಮೀ ಹಾಗೂ 1500ಮೀ ಓಟದಲ್ಲಿ ಚಿನ್ನದ ಪದಕ ಪಡೆದಿದ್ದರು. ಬುಧವಾರ ಶಾರ್ಜಾದಲ್ಲಿ ನಡೆದ ಅಂತರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಮೀಟ್ ನಲ್ಲಿ ಟಿ12 ವಿಭಾಗದ ಕ್ರೀಡಾಕೂಟದ 1500 ಮೀ ಓಟದಲ್ಲಿ ರಾಧಾವೆಂಕಟೇಶ್ 5:16,77 ನಿಮಿಷದಲ್ಲಿ ಕ್ರಮಿಸಿ ಚಿನ್ನದ ಪದಕ ಪಡೆದಿದ್ದಾರೆ.ಟಿ11 ವಿಭಾಗದ 1500ಮೀ ಓಟದಲ್ಲಿ ರಕ್ಷಿತಾರಾಜು 5:44,67ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬೆಳ್ಳಿ ಪದಕ ಪಡೆದು ಜಿಲ್ಲೆಗೆ ಮಾತ್ರವಲ್ಲದೇ ರಾಜ್ಯಕ್ಕೂ ಕೀರ್ತಿ ತಂದಿದ್ದಾರೆ.ರಾಧಾ ವೆಂಕಟೇಶ್ ಮೂಲತ: ಚಿತ್ರದುರ್ಗದ ಹೊಳಲ್ಕೆರೆ ಯವರಾಗಿದ್ದು,ರಕ್ಷಿತಾ ರಾಜು ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಗುಡ್ನಳ್ಳಿ ಗ್ರಾಮದವರಾಗಿದ್ದಾರೆ. ಇವರ ಸಾಧನೆಗೆ ಆಶಾ ಕಿರಣ ಶಾಲೆಯ ಆಡಳಿತ ವರ್ಗ ಹಾಗೂ ಸಿಬ್ಬಂದಿ ವರ್ಗ ಹಾಗೂ ಕ್ರೀಡಾಭಿಮಾನಿಗಳು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು