3:09 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಿಜೆಪಿ ಫೇಸ್ಬುಕ್ ಪೇಜ್: ಡಿ.ವಿ.ಸದಾನಂದ ಗೌಡ ಔಟ್; ಶೋಭಾ ಕರಂದ್ಲಾಜೆ, ಜ್ಯೋತಿರಾದಿತ್ಯ ಇನ್ 

10/07/2021, 07:44

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟದಿಂದ ಕೊಕ್ ನೀಡಲಾದ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಪಕ್ಷದ ಫೇಸ್ ಬುಕ್ ಪೇಜ್ ನಿಂದ ಡಿಲಿಟ್ ಮಾಡಲಾಗಿದೆ. ಹಾಗೆ ಹೊಸ ಮುಖಗಳ ಸೇರ್ಪಡೆಯಾಗಿದೆ.

ಸಂಪುಟದಿಂದ ಕೈಬಿಟ್ಟವರಲ್ಲಿ ಡಾ. ಹರ್ಷವರ್ಧನ ಹಾಗೂ ಜಾವ್ಡೇಕರ್ ಅವರನ್ನು ಕೂಡ ಬಿಜೆಪಿ ಪೇಸ್ ಬುಕ್ ಪೇಜ್ ನಿಂದ ಕೈಬಿಡಲಾಗಿದೆ. ಜ್ಯೋತಿರಾದಿತ್ಯ ಸಿಂಧ್ಯಾ, ಶೋಭಾ ಕರಂದ್ಲಾಜೆ, ಅನುಪ್ರಿಯಾ ಸಿಂಗ್ ಪಟೇಲ್ ಹಾಗೂ ವೈಷ್ಣವ್ ಅವರನ್ನು ಫೇಸ್ ಬುಕ್ ಪೇಜ್ ಗೆ ಸೇರಿಸಲಾಗಿದೆ.

ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರಿ ಬದಲಾವಣೆ ಮಾಡಿದ್ದಾರೆ. ಸಾಮಾಜಿಕ ನ್ಯಾಯ ಒದಗಿಸುವ ಪ್ರಯತ್ನ ನಡೆದಿದೆ. ಸಂಪುಟದಲ್ಲಿ ಮೀಸಲಾತಿ ಪರಿಕಲ್ಪನೆಗೆ ಭಾರಿ ಒತ್ತು ನೀಡಲಾಗಿದೆ. 77 ಮಂತ್ರಿಗಳ ಸಂಪುಟದಲ್ಲಿ 52 ಮಂತ್ರಿಗಳನ್ನು ಮೀಸಲಾತಿ ಆಧಾರದಲ್ಲಿ ನೇಮಕ ಮಾಡಲಾಗಿದೆ. ಎಸ್ ಸಿ 12, ಎಸ್ ಟಿ 8, ಹಿಂದುಳಿದ ವರ್ಗ 27 ಹಾಗೂ ಅಲ್ಪಸಂಖ್ಯಾತರ 5 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಸಂಪುಟದಲ್ಲಿ 11 ಮಂದಿ ಮಹಿಳೆಯರಿಗೆ ಸ್ಥಾನ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು