9:33 AM Monday19 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಬಿಜೆಪಿ ಫೇಸ್ಬುಕ್ ಪೇಜ್: ಡಿ.ವಿ.ಸದಾನಂದ ಗೌಡ ಔಟ್; ಶೋಭಾ ಕರಂದ್ಲಾಜೆ, ಜ್ಯೋತಿರಾದಿತ್ಯ ಇನ್ 

10/07/2021, 07:44

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟದಿಂದ ಕೊಕ್ ನೀಡಲಾದ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಪಕ್ಷದ ಫೇಸ್ ಬುಕ್ ಪೇಜ್ ನಿಂದ ಡಿಲಿಟ್ ಮಾಡಲಾಗಿದೆ. ಹಾಗೆ ಹೊಸ ಮುಖಗಳ ಸೇರ್ಪಡೆಯಾಗಿದೆ.

ಸಂಪುಟದಿಂದ ಕೈಬಿಟ್ಟವರಲ್ಲಿ ಡಾ. ಹರ್ಷವರ್ಧನ ಹಾಗೂ ಜಾವ್ಡೇಕರ್ ಅವರನ್ನು ಕೂಡ ಬಿಜೆಪಿ ಪೇಸ್ ಬುಕ್ ಪೇಜ್ ನಿಂದ ಕೈಬಿಡಲಾಗಿದೆ. ಜ್ಯೋತಿರಾದಿತ್ಯ ಸಿಂಧ್ಯಾ, ಶೋಭಾ ಕರಂದ್ಲಾಜೆ, ಅನುಪ್ರಿಯಾ ಸಿಂಗ್ ಪಟೇಲ್ ಹಾಗೂ ವೈಷ್ಣವ್ ಅವರನ್ನು ಫೇಸ್ ಬುಕ್ ಪೇಜ್ ಗೆ ಸೇರಿಸಲಾಗಿದೆ.

ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರಿ ಬದಲಾವಣೆ ಮಾಡಿದ್ದಾರೆ. ಸಾಮಾಜಿಕ ನ್ಯಾಯ ಒದಗಿಸುವ ಪ್ರಯತ್ನ ನಡೆದಿದೆ. ಸಂಪುಟದಲ್ಲಿ ಮೀಸಲಾತಿ ಪರಿಕಲ್ಪನೆಗೆ ಭಾರಿ ಒತ್ತು ನೀಡಲಾಗಿದೆ. 77 ಮಂತ್ರಿಗಳ ಸಂಪುಟದಲ್ಲಿ 52 ಮಂತ್ರಿಗಳನ್ನು ಮೀಸಲಾತಿ ಆಧಾರದಲ್ಲಿ ನೇಮಕ ಮಾಡಲಾಗಿದೆ. ಎಸ್ ಸಿ 12, ಎಸ್ ಟಿ 8, ಹಿಂದುಳಿದ ವರ್ಗ 27 ಹಾಗೂ ಅಲ್ಪಸಂಖ್ಯಾತರ 5 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಸಂಪುಟದಲ್ಲಿ 11 ಮಂದಿ ಮಹಿಳೆಯರಿಗೆ ಸ್ಥಾನ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು