8:36 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಿಜೆಪಿ ಫೇಸ್ಬುಕ್ ಪೇಜ್: ಡಿ.ವಿ.ಸದಾನಂದ ಗೌಡ ಔಟ್; ಶೋಭಾ ಕರಂದ್ಲಾಜೆ, ಜ್ಯೋತಿರಾದಿತ್ಯ ಇನ್ 

10/07/2021, 07:44

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟದಿಂದ ಕೊಕ್ ನೀಡಲಾದ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಪಕ್ಷದ ಫೇಸ್ ಬುಕ್ ಪೇಜ್ ನಿಂದ ಡಿಲಿಟ್ ಮಾಡಲಾಗಿದೆ. ಹಾಗೆ ಹೊಸ ಮುಖಗಳ ಸೇರ್ಪಡೆಯಾಗಿದೆ.

ಸಂಪುಟದಿಂದ ಕೈಬಿಟ್ಟವರಲ್ಲಿ ಡಾ. ಹರ್ಷವರ್ಧನ ಹಾಗೂ ಜಾವ್ಡೇಕರ್ ಅವರನ್ನು ಕೂಡ ಬಿಜೆಪಿ ಪೇಸ್ ಬುಕ್ ಪೇಜ್ ನಿಂದ ಕೈಬಿಡಲಾಗಿದೆ. ಜ್ಯೋತಿರಾದಿತ್ಯ ಸಿಂಧ್ಯಾ, ಶೋಭಾ ಕರಂದ್ಲಾಜೆ, ಅನುಪ್ರಿಯಾ ಸಿಂಗ್ ಪಟೇಲ್ ಹಾಗೂ ವೈಷ್ಣವ್ ಅವರನ್ನು ಫೇಸ್ ಬುಕ್ ಪೇಜ್ ಗೆ ಸೇರಿಸಲಾಗಿದೆ.

ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರಿ ಬದಲಾವಣೆ ಮಾಡಿದ್ದಾರೆ. ಸಾಮಾಜಿಕ ನ್ಯಾಯ ಒದಗಿಸುವ ಪ್ರಯತ್ನ ನಡೆದಿದೆ. ಸಂಪುಟದಲ್ಲಿ ಮೀಸಲಾತಿ ಪರಿಕಲ್ಪನೆಗೆ ಭಾರಿ ಒತ್ತು ನೀಡಲಾಗಿದೆ. 77 ಮಂತ್ರಿಗಳ ಸಂಪುಟದಲ್ಲಿ 52 ಮಂತ್ರಿಗಳನ್ನು ಮೀಸಲಾತಿ ಆಧಾರದಲ್ಲಿ ನೇಮಕ ಮಾಡಲಾಗಿದೆ. ಎಸ್ ಸಿ 12, ಎಸ್ ಟಿ 8, ಹಿಂದುಳಿದ ವರ್ಗ 27 ಹಾಗೂ ಅಲ್ಪಸಂಖ್ಯಾತರ 5 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಸಂಪುಟದಲ್ಲಿ 11 ಮಂದಿ ಮಹಿಳೆಯರಿಗೆ ಸ್ಥಾನ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು