6:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಉಡುಪಿ ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡಿದ್ದ ಗೋಪಾಡಿಯ ನಿವಾಸಿ ಚಿಕಿತ್ಸೆ ಫಲಿಸದೆ ಸಾವು

24/02/2023, 13:13

ಉಡುಪಿ(reporterkarnataka.com):
ಉಡುಪಿ ನಗರದ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಇಂದು ನಡೆದಿದೆ.

ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು,ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ವ್ಯಕ್ತಿ ಮೃತಪಟ್ಟಿದ್ದರು.
ಮೃತರ ಬಳಿ ಆಧಾರ್ ಕಾರ್ಡ್ ಸಿಕ್ಕಿದ್ದು, ಅದರಂತೆ ಮೃತರ ಹೆಸರು ಮಾರ್ಟಿನ್ ಪ್ರಸಾದ್ ಮಾಬೆನ್, ಕುಂದಾಪುರದ ಗೋಪಾಡಿ ನಿವಾಸಿ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಸೂರಜ್ ಕಡಿಯಾಳಿ ಸಹಕರಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು