6:41 PM Monday4 - May 2026
ಬ್ರೇಕಿಂಗ್ ನ್ಯೂಸ್
ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ…

ಇತ್ತೀಚಿನ ಸುದ್ದಿ

ರಾಜಕೀಯ ತೆವಳಿಗೆ ಆರಾಧ್ಯ ದೇವರಿಗೆ ಅವಮಾನ ಮಾಡಿದರೆ ಕ್ಷಮೆ ಇರದು: ಜೆಡಿಎಸ್ ಮುಖಂಡೆ ಡಾ. ಸುಮತಿ ಹೆಗ್ಡೆ

24/02/2023, 23:39

ಮಂಗಳೂರು(reporterkarnataka.com): ಶತಮಾನಗಳಿಂದ ತುಳುನಾಡ ಜನರು ಆರಾಧಿಸುತ್ತಾ ಬಂದಿರುವ ನಾಗಬನ , ಪಂಜುರ್ಲಿ ದೈವಗಳ ಹೆಸರಲ್ಲಿ ತನ್ನ ರಾಜಕೀಯ ತೆವಳು ತೀರಿಸುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಯವರ ನಡೆಯು ತುಳುನಾಡ ಜನರಿಗೆ ಅತ್ಯಂತ ನೋವನ್ನು ತಂದಿದೆ ಎಂದು ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಅಧ್ಯಕ್ಷೆ ಸುಮತಿ ಎಸ್. ಹೆಗ್ಡೆ ಹೇಳಿದ್ದಾರೆ.

ಆಚಾರ ವಿಚಾರವಿಲ್ಲದ ಜನರಿಂದ ಮಾತ್ರ ಇಂತಹ ನಡೆಯನ್ನು ನಿರೀಕ್ಷೆ ಮಾಡಬಹುದು. ಅದೇ ರೀತಿ ತುಳು ಭಾಷೆಯ ಬಗ್ಗೆ ವ್ಯಂಗ್ಯವಾಗಿ ಮಾತಾಡಿದ ಸಚಿವ ಮಾಧುಸ್ವಾಮಿಯವರು ಕೂಡ ತಮ್ಮ ನೈಜ ಸ್ವಭಾವವನ್ನು ವ್ಯಕ್ತಪಡಿಸುತ್ತಿದ್ದಾರೆ.ಈ ರೀತಿಯ ರಾಜಕಾರಣವು ಅತ್ಯಂತ ಕೀಳು ಮಟ್ಟದ್ದಾಗಿದೆ. ಇದರ ಗಂಭೀರ ಪರಿಣಾಮವನ್ನು ಬರುವ ಚುನಾವಣೆಯಲ್ಲಿ ಎದುರಿಸಬೇಕಾದಿತು ಎಂದು
ಡಾ‌ ಸುಮತಿ ಹೆಗ್ಡೆ ಅವರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು