5:11 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ರಾಜಕೀಯ ತೆವಳಿಗೆ ಆರಾಧ್ಯ ದೇವರಿಗೆ ಅವಮಾನ ಮಾಡಿದರೆ ಕ್ಷಮೆ ಇರದು: ಜೆಡಿಎಸ್ ಮುಖಂಡೆ ಡಾ. ಸುಮತಿ ಹೆಗ್ಡೆ

24/02/2023, 23:39

ಮಂಗಳೂರು(reporterkarnataka.com): ಶತಮಾನಗಳಿಂದ ತುಳುನಾಡ ಜನರು ಆರಾಧಿಸುತ್ತಾ ಬಂದಿರುವ ನಾಗಬನ , ಪಂಜುರ್ಲಿ ದೈವಗಳ ಹೆಸರಲ್ಲಿ ತನ್ನ ರಾಜಕೀಯ ತೆವಳು ತೀರಿಸುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಯವರ ನಡೆಯು ತುಳುನಾಡ ಜನರಿಗೆ ಅತ್ಯಂತ ನೋವನ್ನು ತಂದಿದೆ ಎಂದು ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಅಧ್ಯಕ್ಷೆ ಸುಮತಿ ಎಸ್. ಹೆಗ್ಡೆ ಹೇಳಿದ್ದಾರೆ.

ಆಚಾರ ವಿಚಾರವಿಲ್ಲದ ಜನರಿಂದ ಮಾತ್ರ ಇಂತಹ ನಡೆಯನ್ನು ನಿರೀಕ್ಷೆ ಮಾಡಬಹುದು. ಅದೇ ರೀತಿ ತುಳು ಭಾಷೆಯ ಬಗ್ಗೆ ವ್ಯಂಗ್ಯವಾಗಿ ಮಾತಾಡಿದ ಸಚಿವ ಮಾಧುಸ್ವಾಮಿಯವರು ಕೂಡ ತಮ್ಮ ನೈಜ ಸ್ವಭಾವವನ್ನು ವ್ಯಕ್ತಪಡಿಸುತ್ತಿದ್ದಾರೆ.ಈ ರೀತಿಯ ರಾಜಕಾರಣವು ಅತ್ಯಂತ ಕೀಳು ಮಟ್ಟದ್ದಾಗಿದೆ. ಇದರ ಗಂಭೀರ ಪರಿಣಾಮವನ್ನು ಬರುವ ಚುನಾವಣೆಯಲ್ಲಿ ಎದುರಿಸಬೇಕಾದಿತು ಎಂದು
ಡಾ‌ ಸುಮತಿ ಹೆಗ್ಡೆ ಅವರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು