1:10 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್ 1ರಿಂದ ರಾಜ್ಯದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

25/02/2023, 21:38

ಮಂಗಳೂರು(reporterkarnataka.com): ವೇತನ ಭತ್ತೆ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಮಹಾನಗರಪಾಲಿಕೆ ನೌಕರರ ಸಂಘದ ವತಿಯಿಂದ ಮಾ. 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದೆ.

ರಾಜ್ಯ ಸರಕಾರಿ ನೌಕರರ ಸಂಘದ ಸಭೆಯ ನಿರ್ಣಯದಂತೆ ಈ ಮುಷ್ಕರ ನಡೆಯಲಿದೆ. ಮಹಾನಗರ ಪಾಲಿಕೆ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಅದಷ್ಟು ಬೇಗ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನ ಅನುಷ್ಠಾನಕ್ಕೆ ತರಬೇಕು, ಕರ್ನಾಟಕದಲ್ಲಿಯೂ ಎನ್ ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು, ಪಾಲಿಕೆ ಅಧಿಕಾರಿ, ನೌಕರರ ನೇಮಕಾತಿ ನಿಯಮಾವಳಿ ಅಧಿಸೂಚನೆ ಪ್ರಕಟಿಸಬೇಕು,ಆರೋಗ್ಯ ಸಂಜೀವಿನಿ ಜಾರಿ ಸೇರಿ ಇತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಂಘದ ಅಧ್ಯಕ್ಷ ಎ. ಅಮೃತರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು