4:14 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಚಿತ್ರಾಪುರ: ಗಾಂಜಾ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ; ಆಟೋ ಚಾಲಕ ಗಂಭೀರ ಗಾಯ

27/02/2023, 10:16

ಮಂಗಳೂರು(reporterkarnataka.com): ನಗರದ ಹೊರವಲಯದ ಚಿತ್ರಾಪುರ ಸಮೀಪದ
ಗಾಂಜಾ ಸೇವಿಸಿದ ಇಬ್ಬರು ದುಷ್ಕರ್ಮಿಗಳು ಆಟೋ ಚಾಲಕರ ಮೇಲೆ ತಲವಾರಿನಿಂದ ದಾಳಿ ನಡೆಸಿ, ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ.

ಪಣಂಬೂರು ಮೊಗವೀರ ಮಹಾಸಭಾ ವ್ಯಾಪ್ತಿಯ ಕಡಲತೀರದಲ್ಲಿ ಈ ಘಟನೆ ನಡೆದಿದ್ದು, ತಲವಾರು ದಾಳಿಯಿಂದ ಗಂಭೀರ ಗಾಯಗೊಂಡ ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಡಲ್ಕೊರೆತ ತಡೆಯಲು ಹಾಕಿರುವ ಬಂಡೆಗಳ ಮೇಲೆ ಗಾಂಜಾ ಸೇದುವುದು, ಮಾರಾಟ ಮಾಡುವುದು ಹಾಗೂ ಅಕ್ರಮ ನಡೆಸುವುದು ನಡೆಯುತ್ತಿತ್ತು. ಇಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆಸದಂತೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು. ಇದೇ ದ್ವೇಷದಿಂದ ಚಾಲಕನ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಸ್ಥಳೀಯ ಮುಖ್ಯಸ್ಥರಾದ ಮಾಧವ ಸುವರ್ಣ ಅವರಿಗೂ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ. ದುಷ್ಕರ್ಮಿಗಳು ತಲವಾರು ಬೀಸಿದಾಗ ಸ್ಥಳದಲ್ಲಿದ್ದ ಹೆಚ್ಚಿನವರು ಓಡಿ ಹೋಗಿದ್ದಾರೆ. ಒಬ್ಬನನ್ನು ಸ್ಥಳೀಯರು ಹಿಡಿದರೆ, ಮತ್ತೊಬ್ಬ ಪರಾರಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು