2:23 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಚಿತ್ರಾಪುರ: ಗಾಂಜಾ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ; ಆಟೋ ಚಾಲಕ ಗಂಭೀರ ಗಾಯ

27/02/2023, 10:16

ಮಂಗಳೂರು(reporterkarnataka.com): ನಗರದ ಹೊರವಲಯದ ಚಿತ್ರಾಪುರ ಸಮೀಪದ
ಗಾಂಜಾ ಸೇವಿಸಿದ ಇಬ್ಬರು ದುಷ್ಕರ್ಮಿಗಳು ಆಟೋ ಚಾಲಕರ ಮೇಲೆ ತಲವಾರಿನಿಂದ ದಾಳಿ ನಡೆಸಿ, ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ.

ಪಣಂಬೂರು ಮೊಗವೀರ ಮಹಾಸಭಾ ವ್ಯಾಪ್ತಿಯ ಕಡಲತೀರದಲ್ಲಿ ಈ ಘಟನೆ ನಡೆದಿದ್ದು, ತಲವಾರು ದಾಳಿಯಿಂದ ಗಂಭೀರ ಗಾಯಗೊಂಡ ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಡಲ್ಕೊರೆತ ತಡೆಯಲು ಹಾಕಿರುವ ಬಂಡೆಗಳ ಮೇಲೆ ಗಾಂಜಾ ಸೇದುವುದು, ಮಾರಾಟ ಮಾಡುವುದು ಹಾಗೂ ಅಕ್ರಮ ನಡೆಸುವುದು ನಡೆಯುತ್ತಿತ್ತು. ಇಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆಸದಂತೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು. ಇದೇ ದ್ವೇಷದಿಂದ ಚಾಲಕನ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಸ್ಥಳೀಯ ಮುಖ್ಯಸ್ಥರಾದ ಮಾಧವ ಸುವರ್ಣ ಅವರಿಗೂ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ. ದುಷ್ಕರ್ಮಿಗಳು ತಲವಾರು ಬೀಸಿದಾಗ ಸ್ಥಳದಲ್ಲಿದ್ದ ಹೆಚ್ಚಿನವರು ಓಡಿ ಹೋಗಿದ್ದಾರೆ. ಒಬ್ಬನನ್ನು ಸ್ಥಳೀಯರು ಹಿಡಿದರೆ, ಮತ್ತೊಬ್ಬ ಪರಾರಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು