5:05 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಸಾಹಿತ್ಯ ಸೇವೆ: ಹಂಪಿಯಲ್ಲಿ ಡಾ. ವಾಣಿಶ್ರೀ ಕಾಸರಗೋಡು ಅವರಿಗೆ ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿ ಪ್ರದಾನ

27/02/2023, 16:34

ಕಾಸರಗೋಡು(reporterkarnataka.com):ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಇದರ ಸಹಯೋಗದೊಂದಿಗೆ ಹಂಪಿಯ ಶ್ರೀ ಶಿವರಾಮ ಅವಧೂತರ ಆಶ್ರಮ ಹೇಮಕೂಟದಲ್ಲಿ ನಡೆದ ಸಾವಿರ ಕಾವ್ಯ ಗೋಷ್ಠಿಯ ಸಂಭ್ರಮದಲ್ಲಿ ಸಾಹಿತಿ ಹಾಗೂ ಕಾಸರಗೋಡಿನ ವೈದ್ಯೆ ಆಗಿರುವ
ಡಾ ವಾಣಿಶ್ರೀ ಕಾಸರಗೋಡು ಅವರಿಗೆ ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಧು ನಾಯ್ಕ ಲಂಬಾಣಿ ಅವರ ನೇತೃತ್ವದಲ್ಲಿ ಭಾನುವಾರ ವಿಶ್ವ ವಿಖ್ಯಾತ ಹಂಪಿಯ ಹೇಮಕೂಟದಲ್ಲಿ ನಡೆದ ಸಾವಿರ ಕಾವ್ಯ ಗೋಷ್ಠಿಯ ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ ನೆರವೇರಿತು.
ಕಾಸರಗೋಡಿನ ನೆಲ್ಲಿಕಟ್ಟೆ ಚೂರಿಪ್ಪಳ್ಳದ ಪ್ರಕೃತಿ ಆಯುರ್ವೇದ ಆಸ್ಪತ್ರೆಯ ವೈದ್ಯೆ ಆಗಿರುವ ಸಾಹಿತಿ ಡಾ.ವಾಣಿಶ್ರೀ ಕಾಸರಗೋಡು ಅವರನ್ನು ಅವರ ಸಾಹಿತ್ಯ ಸೇವೆಯನ್ನು ಗುರುತಿಸಿ ಅವರಿಗೆ ರಾಜ್ಯ ಮಟ್ಟದ ಕಾವ್ಯಶ್ರೀ ಪ್ರಶಸ್ತಿ ನೀಡಿ ಹಲವಾರು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

ಡಾ ವಾಣಿಶ್ರೀ ಕಾಸರಗೋಡು ಅವರು ಗಡಿನಾಡು ಕಾಸರಗೋಡಿನಲ್ಲಿ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಕಾಸರಗೋಡು ಎಂಬ ಸಂಸ್ಥೆಯನ್ನು ಸ್ಥಾಪಿಸಿ ನಿರಂತರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕನ್ನಡ ಪರ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಕಾಸರಗೋಡಿನಲ್ಲಿ ಕನ್ನಡ ಭಾಷೆಯ ಉಳಿಸಿ ಬೆಳೆಸಲು ತುಂಬಾ ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು