2:35 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿದ ಇಬ್ಬರು ಕೂಲಿ ಕಾರ್ಮಿಕರು ಸಾವು

27/02/2023, 22:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಮುಳ್ಳು ಹಂದಿ ಶಿಕಾರಿ ಮಾಡಲು ಸುರಂಗದ ಒಳಗೆ ಪ್ರವೇಶಿಸಿದ ಇಬ್ಬರು ಕೂಲಿ ಕಾರ್ಮಿಕರು ಉಸಿರಾಟ ಆಗದೆ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಮಾಳಿಗನಾಡು ಎಂಬಲ್ಲಿ ಘಟನೆ ನಡೆದಿದೆ.

ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಾದ ತಮಿಳುನಾಡು ಮೂಲದ ವಿಜಯ್ (28) ಹಾಗೂ ಶರತ್ (26) ಅವರು ಉಸಿರುಗಟ್ಟಿ ಸಾವನ್ನಪ್ಪಿದ ಕೂಲಿಕಾರ್ಮಿಕರು.
ಕಾಳು ಮೆಣಸು ಕುಯ್ಯಲು ಬಂದಿದ್ದ ತಮಿಳುನಾಡಿನ ಕಾರ್ಮಿಕರು ಮುಳ್ಳು ಹಂದಿ ಶಿಕಾರಿ ಮಾಡಲು ಗುಡ್ಡಕ್ಕೆ ತೆರಳಿದ್ದರು ಎನ್ನಲಾಗಿದೆ.
ಸುರಂಗದ ದರಕ್ಕೆ ಹೊಗೆ ಹಾಕಿ ಇಬ್ಬರು ದರದ ಒಳಗೆ ನುಗ್ಗಿದ ಪರಿಣಾಮ ಹೊಗೆಯಿಂದಾ ಉಸಿರಾಡಲು ಸಾಧ್ಯವಾಗದೆ ಗುಹೆಯೊಳಗೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳುವ ಮಾಹಿತಿ ನೀಡಿದ್ದಾರೆ.


ಸ್ಥಳಕ್ಕೆ ಬಾಳೂರು ಸಬ್ ಇನ್ಸ್ ಪೆಕ್ಟರ್ ಪವನ್ ಕುಮಾರ್, ಪೊಲೀಸರು ಮತ್ತು ಸ್ಥಳೀಯರು ಗುಹೆಯೊಳಗೆ ನುಗ್ಗಿ ಶವಗಳನ್ನು ಹೊರತೆಗೆದರು.
ಮೂಡಿಗೆರೆ ತಾಲ್ಲೂಕಿನ ಬಾಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು