10:44 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಕಾರ್ಕಳ: ಟಿಪ್ಪರ್ ಲಾರಿ ಅಡ್ಡವಿಟ್ಟು ಜ್ಯುವೆಲ್ಲರಿಯಿಂದ ಬೆಳ್ಳಿ ಆಭರಣ ಕಳವು

28/02/2023, 10:34

ಕಾರ್ಕಳ( reporterkarnataka.com): ಟಿಪ್ಪರ್ ನಲ್ಲಿ ಆಗಮಿಸಿದ ಕಳ್ಳರು ಜ್ಯುವೆಲ್ಲರಿ ಶಾಪ್ ರಸ್ತೆಗೆ ಕಾಣದಂತೆ ಟಿಪ್ಪರ್ ಅಡ್ಡಯಿಟ್ಟು ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಕಳ್ಳತನ ಮಾಡಿ ಬಳಿಕ ಟಿಪ್ಪರ್ ಬಿಟ್ಟು ಹೋದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಫಾರೆವರ್ ಹೋಟೇಲ್ ಬಳಿಯ ಅರಾದ್ಯ ಜ್ಯುವೆಲ್ಲರ್ ನಲ್ಲಿ ಫೆ.26 ರ ರಾತ್ರಿ ನಡೆದಿದೆ.

ಶೋಕೆಸ್ ನಲ್ಲಿದ್ದ ಸುಮಾರು 20,000/- ರೂ ಮೌಲ್ಯದ ಸುಮಾರು 260 ಗ್ರಾಂ ತೂಕದ ಬೆಳ್ಳಿಯ ಆಭರಣ ಕಳವು ಮಾಡಿಕೊಂಡು ಹೋಗಿ ಟಿಪ್ಪರ್ ನ್ನು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ.ಕಳ್ಳತನಕ್ಕೆ ಮೊದಲು ಟಿಪ್ಪರ್ ಅಡ್ಡ ಇಟ್ಟು ಅನಂತರ, ಯಾವುದೇ ರೀತಿಯಲ್ಲಿ ಗುರುತು ಸಿಗದ ಹಾಗೆ, ಮುಖಕ್ಕೆ ಮುಸುಕು ಹಾಕಿಕೊಂಡು, ಅಂಗಡಿಯ ಬೀಗ ಒಡೆದು ಒಳಗೆ ನುಗ್ಗಿದ್ದಾರೆ.ಇದನ್ನು ಗಮನಿಸಿದ ಸ್ಥಳೀಯ ಅಂಗಡಿಯ ಸೆಕ್ಯೂರಿಟಿ ಗಾರ್ಡ್ ಹೋದಾಗ ಪಿಸ್ತುಲ್ ತೋರಿಸಿ, ಹೆದರಿಸಿ ಕಳಿಸಿದ್ದಾರೆ.ಕಳವುಗೈದ ಬಳಿಕ ಟಿಪ್ಪರನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು