3:46 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕಾರ್ಕಳ: ಟಿಪ್ಪರ್ ಲಾರಿ ಅಡ್ಡವಿಟ್ಟು ಜ್ಯುವೆಲ್ಲರಿಯಿಂದ ಬೆಳ್ಳಿ ಆಭರಣ ಕಳವು

28/02/2023, 10:34

ಕಾರ್ಕಳ( reporterkarnataka.com): ಟಿಪ್ಪರ್ ನಲ್ಲಿ ಆಗಮಿಸಿದ ಕಳ್ಳರು ಜ್ಯುವೆಲ್ಲರಿ ಶಾಪ್ ರಸ್ತೆಗೆ ಕಾಣದಂತೆ ಟಿಪ್ಪರ್ ಅಡ್ಡಯಿಟ್ಟು ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಕಳ್ಳತನ ಮಾಡಿ ಬಳಿಕ ಟಿಪ್ಪರ್ ಬಿಟ್ಟು ಹೋದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಫಾರೆವರ್ ಹೋಟೇಲ್ ಬಳಿಯ ಅರಾದ್ಯ ಜ್ಯುವೆಲ್ಲರ್ ನಲ್ಲಿ ಫೆ.26 ರ ರಾತ್ರಿ ನಡೆದಿದೆ.

ಶೋಕೆಸ್ ನಲ್ಲಿದ್ದ ಸುಮಾರು 20,000/- ರೂ ಮೌಲ್ಯದ ಸುಮಾರು 260 ಗ್ರಾಂ ತೂಕದ ಬೆಳ್ಳಿಯ ಆಭರಣ ಕಳವು ಮಾಡಿಕೊಂಡು ಹೋಗಿ ಟಿಪ್ಪರ್ ನ್ನು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ.ಕಳ್ಳತನಕ್ಕೆ ಮೊದಲು ಟಿಪ್ಪರ್ ಅಡ್ಡ ಇಟ್ಟು ಅನಂತರ, ಯಾವುದೇ ರೀತಿಯಲ್ಲಿ ಗುರುತು ಸಿಗದ ಹಾಗೆ, ಮುಖಕ್ಕೆ ಮುಸುಕು ಹಾಕಿಕೊಂಡು, ಅಂಗಡಿಯ ಬೀಗ ಒಡೆದು ಒಳಗೆ ನುಗ್ಗಿದ್ದಾರೆ.ಇದನ್ನು ಗಮನಿಸಿದ ಸ್ಥಳೀಯ ಅಂಗಡಿಯ ಸೆಕ್ಯೂರಿಟಿ ಗಾರ್ಡ್ ಹೋದಾಗ ಪಿಸ್ತುಲ್ ತೋರಿಸಿ, ಹೆದರಿಸಿ ಕಳಿಸಿದ್ದಾರೆ.ಕಳವುಗೈದ ಬಳಿಕ ಟಿಪ್ಪರನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು