12:50 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಎರ್ಮೆಮಜಲು ಯುವ ಕೇಸರಿ ಭವನ ಲೋಕಾರ್ಪಣೆ: ಡಾ. ಪ್ರಭಾಕರ್ ಭಟ್ ಉದ್ಫಾಟನೆ

28/02/2023, 19:35

ಬಂಟ್ವಾಳ(reporterkarnataka.com):
ಕೇಸರಿಯ ಗುರುತೆ ತ್ಯಾಗ ಮತ್ತು ಸೇವೆ. ಆದುದರಿಂದ ತಮ್ಮ ಸಂಘಟನೆಯ ಹೆಸರಿಗೆ ತಕ್ಕಂತೆ ಹಿಂದೂ ಸಮಾಜದ ಉದ್ಧಾರಕ್ಕಾಗಿ ತ್ಯಾಗ ಹಾಗೂ ಸಮಾಜ ಸೇವೆಯಲ್ಲಿ ನಿರತರಾಗಿ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.

ಅವರು ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು (ರಿ) ಇದರ ವತಿಯಿಂದ ಎರ್ಮೆಮಜಲು ಜಂಕ್ಷನ್ ನಲ್ಲಿ ನಿರ್ಮಾಣವಾದ “ಯುವ ಕೇಸರಿ ಭವನ” ವನ್ನು ದ್ವೀಪ ಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿ ಮಾತನಾಡಿದರು.


ಹಿಂದೂ ಸಮಾಜ ಜಾತಿಭೇದ ಬಿಟ್ಟು ಒಂದಾಗಬೇಕು. ಯುವ ಕೇಸರಿ ಫ್ರೆಂಡ್ಸ್ ಸಂಘಟನೆಯು ಕನಿಷ್ಠ ಪಕ್ಷ ತಮ್ಮ ಗ್ರಾಮ ವ್ಯಾಪ್ತಿ ಯಲ್ಲಿ ಆದರೂ ಹಿಂದೂ ಸಮಾಜದ ಯಾವುದೇ ಒಂದು ಮನೆ ಮುಳಿಹುಲ್ಲಿನ ಮನೆ, ವಿದ್ಯುತ್ ಶಕ್ತಿ ಇಲ್ಲದ ಮನೆ, ಕನಿಷ್ಠ ಪಕ್ಷ ಮನೆಯಲ್ಲಿರುವ ವಿದ್ಯಾರ್ಥಿಗಳು ಪಿಯುಸಿ ತನಕ ವಿದ್ಯಾಭ್ಯಾಸ, ಯಾವುದೇ ರೋಗ ಬಾದೆಯಿಂದ ಔಷಧಿ ಮಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇರದಂತೆ ಇರುವಂತೆ ನೋಡಿಕೊಳ್ಳಬೇಕು, ಸಮಾಜದ ಒಳಿತಿದಗಾಗಿ ರಕ್ತದಾನ,ಕಣ್ಣು ದಾನ, ಅಂಗಾಂಗ ದಾನಗಳ ಬಗ್ಗೆ ಪ್ರಚೋದಿಸಿ ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸಬೇಕು, ಆಧುನಿಕ ಆಡಂಬರಗಳನ್ನು ಬಿಟ್ಟು ಭಜನೆ ಸತ್ಕಾರ್ಯಗಳಂತ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಬೇಕೆಂದು ಕರೆ ನೀಡಿದರು, ಕಾರ್ಯಕ್ರಮದ ಸಂಘಟಕರು ಕಟ್ಟಡ ಲೋಕಾರ್ಪಣೆಯ ನಿಮಿತ್ತ ಯಾವುದೇ ಆಡಂಬರ ಕಾರ್ಯಕ್ರಮ ಮಾಡದೆ ಧಾರ್ಮಿಕ ಪೂಜಾ ಕಾರ್ಯಕ್ರಮ, ಭಜನಾ ಕಾರ್ಯಕ್ರಮ, ಅನ್ನದಾನ ದ ಮೂಲಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು,

ಇತ್ತೀಚಿನ ಸುದ್ದಿ

ಜಾಹೀರಾತು