6:09 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಲ್ಲಡ್ಕ ಕಟ್ಟೆಮಾರ್ ಮಂತ್ರದೇವತಾ ಕ್ಷೇತ್ರ ವಾರ್ಷಿಕೋತ್ಸವ: ಧಾರ್ಮಿಕ ಸಭೆ

28/02/2023, 19:41

ಕಲ್ಲಡ್ಕ(reporterkarnataka.com): ದೈವ ಆರಾಧನೆ ಮೂಲಕ ಹಿಂದೂ ಸಮಾಜದ ಕುಟುಂಬಗಳು ಒಗ್ಗಟ್ಟಿನಿಂದ ಇರಲು ಸಾಧ್ಯವಾಗಿದೆ, ಅಂತಹ ದೈವರಾದನೆಯ ಮೂಲ ಕಟ್ಟುಪಾಡುಗಳಿಗೆ ಚ್ಯುತಿ ಬಾರದ ರೀತಿಯಲ್ಲಿ ದೈವರಾಧನೆ ನಡೆಸಿಕೊಂಡು ಬರುತ್ತಿರುವ ಮಂತ್ರ ದೇವತಾ ಸಾನಿಧ್ಯ ಎಲ್ಲಾ ದೈವ ಆರಾಧನಾ ಕೇಂದ್ರಗಳಿಗೆ ಮಾದರಿಯಾಗಿದೆ ಎಂದು ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದ ಪರಮಪೂಜ್ಯ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಬಂಟ್ವಾಳ ತಾಲೂಕು ಆಮ್ಟೂರು ಗ್ರಾಮದ ಕಟ್ಟೆಮಾರ್ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯದ ವಾರ್ಷಿ ಕೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೋಹನ್ ರಾಜ್ ಚೌಟ ಪುಂಚೋಳಿಮಾರು ಗುತ್ತು ವಹಿಸಿದ್ದರು.ಈ ಸಂದರ್ಭದಲ್ಲಿ ಮಂತ್ರ ದೇವತಾ ಜನಸೇವಾ ಟ್ರಸ್ಟ್ ವತಿಯಿಂದ ಹಾಗೂ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ವತಿಯಿಂದ ಅಸಕ್ತರನ್ನು ಗುರುತಿಸಿ ಧನಸಹಾಯ ನೀಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿ ಪಡೆದವರನ್ನು ಗುರುತಿಸಿ ಅಭಿನಂದಿಸಲಾಯಿತು.

ಸ್ವಾಮೀಜಿಯವರ ದಿವ್ಯ ಹಸ್ತದಲ್ಲಿ ಮಂತ್ರ ದೇವತೆ ಸಂಬಂಧಪಟ್ಟ ಆಲ್ಬಮ್ ಸಾಂಗ್ ಬಿಡುಗಡೆ ಮಾಡಲಾಯಿತು. ವೇದಿಕೆಯಲ್ಲಿ ಭಾರತ್ ಗ್ಲಾಸ್ ಅಂಡ್ ಕ್ರಾಕರಿಸ್ ಸಿಯಾನ ಚಿಕ್ಕನ್ ಕಾನ್ಸೆಪ್ಟ್ ಮ್ಯನಿಫ್ಯಾಕ್ಚರಿಂಗ್ ಪ್ರೈವೇಟ್ ಲಿಮಿಟೆಡ್ ಇದರ ಪಿ. ಜಗದೀಶ್ ಕುಮಾರ್ ಮತ್ತು ಸ್ನೇಹಾ ಜಗದೀಶ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಬಂಟ್ವಾಳದ ಎಇಇ ತಾರನಾಥ ಸಾಲಿಯಾನ್ ಪಿ, ಎಪಿಎಂಸಿ ಸಕಲೇಶಪುರ ಇದರ ಮಾಜಿ ಅಧ್ಯಕ್ಷ ರಂಜೇಶ್, ಚಲನಚಿತ್ರ ನಟಿ ನವ್ಯ ಪೂಜಾರಿ, ವಿಶಾಖ ಶೆಟ್ಟಿ ಮುಂಬೈ, ಮೀಶಲಾಕ್ಷಿ ಎನ್ ಬೆಂಗಳೂರು, ಗಣೇಶ್ ಇಂಡಸ್ಟ್ರೀಸ್ ದೇರಳಕಟ್ಟೆ ಯ ಶರತ್ ರಾಜ್ ಶೆಟ್ಟಿ, ವಿಜಯಕುಮಾರ್ ಬೆಳ್ತಂಗಡಿ, ಯಾದವ ಬಾಣಬೆಟ್ಟು, ಮುಂಬೈಯ ಉದ್ಯಮಿ ಹರೀಶ್ ಶೆಟ್ಟಿ, ಅಶೋಕ ಕರ್ಕೇರ ಸಜೀಪ, ಯಶವಂತ ಬಂಗೇರ ಕಾಪು, ಪಂಜಿಕಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಸಂಜೀವ ಪೂಜಾರಿ, ಚೆನ್ನಪ್ಪ ಕೋಟ್ಯಾನ್, ಸುಪ್ರೀತ್ ಶೆಟ್ಟಿ ಬಾಳೆಹೊನ್ನೂರು, ಪಿ ಸಿ ಜಯರಾಮ್ ಸುಳ್ಯ, ಕಿಶೋರ್ ಕುಮಾರ್ ಕಟ್ಟೆ ಮಾರ್, ಮೊದಲಾದವರು ಉಪಸ್ಥಿತರಿದ್ದರು.
ಮಂತ್ರ ದೇವತಾ ಸಾನಿಧ್ಯದ ಧರ್ಮದರ್ಶಿ ಮನೋಜ್ ಕುಮಾರ್ ಸ್ವಾಗತಿಸಿದರು. ವಸಂತ ಪೂಜಾರಿ ಬಟ್ಟಹಿತ್ತಿಲು ವಂದಿಸಿದರು, ದಿನೇಶ್ ರಾಯೀ ಕಾರ್ಯಕ್ರಮ ನಿರ್ವಹಿಸಿದರು.
ನಂತರ ಮಾಣಿಲ ಮೋಹನ್ ದಾಸ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಮಂತ್ರ ದೇವತೆಗೆ ವಿಶೇಷವಾಗಿ ದೊಂದಿ ಬೆಳಕಿನಲ್ಲಿ ನಡ್ತನಸೇವೆ ಜರಗಿತು,

ಇತ್ತೀಚಿನ ಸುದ್ದಿ

ಜಾಹೀರಾತು