3:46 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಎಕ್ಕೂರು ಕಂಟ್ರಿ ಕ್ಲಬ್‌ ಹಿಂಬದಿ ರಾಜಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್‌ ಶಿಲಾನ್ಯಾಸ

28/02/2023, 23:46

ಮಂಗಳೂರು(reporterkarnataka.com) : ಮಹಾನಗರಪಾಲಿಕೆ ವ್ಯಾಪ್ತಿಯ 49ನೇ ಕಂಕನಾಡಿ ವಾರ್ಡ್‌ನ ಎಕ್ಕೂರು ಕಂಟ್ರಿ ಕ್ಲಬ್‌ ಹಿಂಬದಿಯ ಮತ್ತು ಕಲ್ಲಕಟ್ಟ ಸದಾಶಿವ ನಗರದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಮಂಗಳವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ ನಗರದ ವಿವಿಧ ಕಡೆಗಳಲ್ಲಿ ರಾಜಕಾಲುವೆಗಳ ತಡೆಗೋಡೆ ಮತ್ತು ಚರಂಡಿಗಳ ನಿರ್ಮಾಣಕ್ಕೆಂದೇ 100 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಈ ಮೊತ್ತದಲ್ಲಿ ಕಾಮಗಾರಿಗಳನ್ನು ಮಾಡಿಸಲು ಮುಂದಾಗಿದ್ದಾರೆ. ತಮ್ಮ ಕ್ಷೇತ್ರದ ಜನತೆ ಮಳೆಗಾಲದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕಾಳಜಿವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಗದ್ದೆ, ಬೇಸಾಯ, ಕೃಷಿ ಕಾರ್ಯಗಳು ನಡೆಯುವ ಪ್ರದೇಶಗಳಿಗೆ ಮಾತ್ರ ಸಣ್ಣ ನೀರಾವರಿ ಇಲಾಖೆಯ ಅನುದಾನ ಲಭ್ಯವಿರುತ್ತದೆ. ಆದರೆ ಮಂಗಳೂರು ನಗರದ ಜನರ ಮಳೆಗಾಲದ ಪ್ರವಾಹದ ಸಮಸ್ಯೆ ನಿವಾರಣೆಗಾಗಿ ಸಣ್ಣ ನೀರಾವರಿ ಇಲಾಖೆಯಿಂದ ಈ ಅನುದಾನ ಕೊಡಿಸುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್‍‌ ಕಟೀಲು ಅವರು ಸಹಕಾರ ನೀಡಿದ್ದಾರೆ ಎಂದು ಶಾಸಕ ಕಾಮತ್‌ ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
ಕಾರ್ಯಕ್ರಮದಲ್ಲಿ ಕಾರ್ಪೊರೇಟರ್‍‌ ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ, ಯಶೋಧರ್ ಚೌಟ, ಭರತ್ ರಾಜ್‌ ಶೆಟ್ಟಿ, ರೇಖಾ ಶೆಟ್ಟಿ, ಪ್ರೀತಮ್ ತೇಜಸ್ವಿನಿ, ಸುಜಾತಾ ಕೊಟ್ಟಾರಿ, ಚೇತನ್, ಸ್ನೇಹ, ಸುಕೇಶ್‌ ಅಳಪೆ , ಸುಮತಿ, ರಾಘವೇಂದ್ರ ಶೆಟ್ಟಿ, ರಾಮ್ ಎಕ್ಕೂರು, ರವೀಂದ್ರ ರಾವ್, ಕುಮಾರಣ್ಣ, ರಾಜೇಶ್ ಎಕ್ಕೂರು, ರವಿ ಎಕ್ಕೂರು, ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು