11:45 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಎಕ್ಕೂರು ಕಂಟ್ರಿ ಕ್ಲಬ್‌ ಹಿಂಬದಿ ರಾಜಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್‌ ಶಿಲಾನ್ಯಾಸ

28/02/2023, 23:46

ಮಂಗಳೂರು(reporterkarnataka.com) : ಮಹಾನಗರಪಾಲಿಕೆ ವ್ಯಾಪ್ತಿಯ 49ನೇ ಕಂಕನಾಡಿ ವಾರ್ಡ್‌ನ ಎಕ್ಕೂರು ಕಂಟ್ರಿ ಕ್ಲಬ್‌ ಹಿಂಬದಿಯ ಮತ್ತು ಕಲ್ಲಕಟ್ಟ ಸದಾಶಿವ ನಗರದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಮಂಗಳವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ ನಗರದ ವಿವಿಧ ಕಡೆಗಳಲ್ಲಿ ರಾಜಕಾಲುವೆಗಳ ತಡೆಗೋಡೆ ಮತ್ತು ಚರಂಡಿಗಳ ನಿರ್ಮಾಣಕ್ಕೆಂದೇ 100 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಈ ಮೊತ್ತದಲ್ಲಿ ಕಾಮಗಾರಿಗಳನ್ನು ಮಾಡಿಸಲು ಮುಂದಾಗಿದ್ದಾರೆ. ತಮ್ಮ ಕ್ಷೇತ್ರದ ಜನತೆ ಮಳೆಗಾಲದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕಾಳಜಿವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಗದ್ದೆ, ಬೇಸಾಯ, ಕೃಷಿ ಕಾರ್ಯಗಳು ನಡೆಯುವ ಪ್ರದೇಶಗಳಿಗೆ ಮಾತ್ರ ಸಣ್ಣ ನೀರಾವರಿ ಇಲಾಖೆಯ ಅನುದಾನ ಲಭ್ಯವಿರುತ್ತದೆ. ಆದರೆ ಮಂಗಳೂರು ನಗರದ ಜನರ ಮಳೆಗಾಲದ ಪ್ರವಾಹದ ಸಮಸ್ಯೆ ನಿವಾರಣೆಗಾಗಿ ಸಣ್ಣ ನೀರಾವರಿ ಇಲಾಖೆಯಿಂದ ಈ ಅನುದಾನ ಕೊಡಿಸುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್‍‌ ಕಟೀಲು ಅವರು ಸಹಕಾರ ನೀಡಿದ್ದಾರೆ ಎಂದು ಶಾಸಕ ಕಾಮತ್‌ ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
ಕಾರ್ಯಕ್ರಮದಲ್ಲಿ ಕಾರ್ಪೊರೇಟರ್‍‌ ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ, ಯಶೋಧರ್ ಚೌಟ, ಭರತ್ ರಾಜ್‌ ಶೆಟ್ಟಿ, ರೇಖಾ ಶೆಟ್ಟಿ, ಪ್ರೀತಮ್ ತೇಜಸ್ವಿನಿ, ಸುಜಾತಾ ಕೊಟ್ಟಾರಿ, ಚೇತನ್, ಸ್ನೇಹ, ಸುಕೇಶ್‌ ಅಳಪೆ , ಸುಮತಿ, ರಾಘವೇಂದ್ರ ಶೆಟ್ಟಿ, ರಾಮ್ ಎಕ್ಕೂರು, ರವೀಂದ್ರ ರಾವ್, ಕುಮಾರಣ್ಣ, ರಾಜೇಶ್ ಎಕ್ಕೂರು, ರವಿ ಎಕ್ಕೂರು, ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು