2:08 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಕ್ರೀಡಾ ವರದಿಗಾರಿಕೆ: ಜಗದೀಶ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧನಾ ರಾಜ್ಯ ವಿಶೇಷ ಪ್ರಶಸ್ತಿ ಪ್ರದಾನ

01/03/2023, 11:12

ಮಂಗಳೂರು(reporterkarnataka.com): ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ನಾಡು ನುಡಿ ಸಾಹಿತ್ಯ ಸಮ್ಮೇಳನದಲ್ಲಿ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಕ್ರೀಡಾ ವರದಿಗಾರಿಕೆಗಾಗಿ ನೀಡಿದ ಸಾಧನಾ ರಾಜ್ಯ ವಿಶೇಷ ಪ್ರಶಸ್ತಿಯನ್ನು ಕನ್ನಡ ಸಿನಿಮಾ ರಂಗದ ಹಿರಿಯ ನಟ ದೊಡ್ಡಣ್ಣ ಅವರು ಪ್ರದಾನ ಮಾಡಿದರು.

30 ವರ್ಷಗಳಿಂದ ಕ್ರೀಡಾ ಲೇಖನಗಳ ಮೂಲಕ ವಿವಿಧ ಪತ್ರಿಕೆಗಳಲ್ಲಿ ಗುರುತಿಸಿಕೊಂಡಿರುವ ಇವರು ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು,‌ ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಎಸ್. ಗಣೇಶ ರಾವ್, ಕರ್ಣಾಟಕ ಬ್ಯಾಂಕ್ ಚೇರ್ ಮನ್ ಮಹಾಬಲೇಶ್ವರ ರಾವ್ , ಕಲ್ಕೂರ ಪ್ರತಿಷ್ಠಾನದ ಮುಖ್ಯಸ್ಥ ಪ್ರದೀಪ್ ಕುಮಾರ್ ಕಲ್ಕೂರ, ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು , ಹಿರಿಯ ಸಾಹಿತಿ ಇರಾ ನೇಮು ಪೂಜಾರಿ, ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಕಾ.ವೀ. ಕೃಷ್ಣದಾಸ್ , ಸಂಚಾಲಕಿ ಲತಾ ಕೃಷ್ಣದಾಸ್ , ಯುಗಪುರುಷ ಮಾಸ ಪತ್ರಿಕೆ ಸಂಪಾದಕ ಭುವನಾಭಿರಾಮ ಉಡುಪ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು