12:31 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕುಡಿತಕ್ಕೆ ಹಣ ನೀಡಿಲ್ಲ ಎಂದು ಹತ್ತಬ್ಬೆಯನ್ನೇ ಹೊಡೆದು  ಕೊಂದ ಪಾಪಿ ಪುತ್ರ: ದಿನಾ ಹಣಕ್ಕಾಗಿ ಪೀಡಿಸುತ್ತಿದ್ದ ದುರುಳ

11/07/2021, 08:59

ಶ್ಯಾಮಲಾ ಶಿವಪ್ರಸಾದ್ ಚಳ್ಳಕೆರೆ

info.reporterkarnataka@gmail.com

ಸಾರಾಯಿ ಕುಡಿಯಲು ಹಣ ನೀಡಲಿಲ್ಲ ಎಂದು ಪಾಪಿ ಪುತ್ರನೊಬ್ಬ ಹೆತ್ತಬ್ಬೆಯನ್ನೇ ಹೊಡೆದು ಸಾಯಿಸಿದ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ.

45 ವರ್ಷ ವಯಸ್ಸಿನ ರತ್ನಮ್ಮ(45) ಎಂಬವರು ತನ್ನ 22 ವರ್ಷ ವಯಸ್ಸಿನ ಮಗ ಲೋಕೇಶ್ ನಿಂದ ಹತ್ಯೆಗೀಡಾದ ನತದೃಷ್ಟೆ. ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಆರೋಪಿ ಲೋಕೇಶ್

 ಊಟದ ವಿಚಾರದಲ್ಲಿ ತಾಯಿ ಜತೆ ಜಗಳ ತೆಗೆದಿದ್ದಾನೆ. ಬಳಿಕ ಮದ್ಯ ಸೇವನೆಗೆ ಹಣ ನೀಡುವಂತೆ ತಾಯಿಯನ್ನು ಪೀಡಿಸಿದ್ದಾನೆ. ಪ್ರತೀ ದಿನ ಈತನಿಗೆ ಹಣ ನೀಡಿ ಬೇಸತ್ತಿದ್ದ ತಾಯಿ ಮಗನ ಜೊತೆಗೆ ಈ ವಿಚಾರವಾಗಿ ಜಗಳವಾಡಿದ್ದಾರೆ. ಈ ವೇಳೆ ತಾಯಿಯ ಕೆನ್ನೆಗೆ

ಲೋಕೇಶ್ ಬಲವಾಗಿ ಬಾರಿಸಿದ್ದಾನ. ಏಟಿನ ರಭಸಕ್ಕೆ ತಾಯಿ ರತ್ನಮ್ಮ ಕಬ್ಬಿಣದ ಬಾಗಿಲಿನ ಮೇಲೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ . 

ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಮೊಳಕಾಲ್ಮೂರು ಪೊಲೀಸರು ಸ್ಥಳಕ್ಕೆ ಆಗಮಿಸಿದ ಆರೋಪಿ ಲೋಕೇಶನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು