4:31 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕುಡಿತಕ್ಕೆ ಹಣ ನೀಡಿಲ್ಲ ಎಂದು ಹತ್ತಬ್ಬೆಯನ್ನೇ ಹೊಡೆದು  ಕೊಂದ ಪಾಪಿ ಪುತ್ರ: ದಿನಾ ಹಣಕ್ಕಾಗಿ ಪೀಡಿಸುತ್ತಿದ್ದ ದುರುಳ

11/07/2021, 08:59

ಶ್ಯಾಮಲಾ ಶಿವಪ್ರಸಾದ್ ಚಳ್ಳಕೆರೆ

info.reporterkarnataka@gmail.com

ಸಾರಾಯಿ ಕುಡಿಯಲು ಹಣ ನೀಡಲಿಲ್ಲ ಎಂದು ಪಾಪಿ ಪುತ್ರನೊಬ್ಬ ಹೆತ್ತಬ್ಬೆಯನ್ನೇ ಹೊಡೆದು ಸಾಯಿಸಿದ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ.

45 ವರ್ಷ ವಯಸ್ಸಿನ ರತ್ನಮ್ಮ(45) ಎಂಬವರು ತನ್ನ 22 ವರ್ಷ ವಯಸ್ಸಿನ ಮಗ ಲೋಕೇಶ್ ನಿಂದ ಹತ್ಯೆಗೀಡಾದ ನತದೃಷ್ಟೆ. ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಆರೋಪಿ ಲೋಕೇಶ್

 ಊಟದ ವಿಚಾರದಲ್ಲಿ ತಾಯಿ ಜತೆ ಜಗಳ ತೆಗೆದಿದ್ದಾನೆ. ಬಳಿಕ ಮದ್ಯ ಸೇವನೆಗೆ ಹಣ ನೀಡುವಂತೆ ತಾಯಿಯನ್ನು ಪೀಡಿಸಿದ್ದಾನೆ. ಪ್ರತೀ ದಿನ ಈತನಿಗೆ ಹಣ ನೀಡಿ ಬೇಸತ್ತಿದ್ದ ತಾಯಿ ಮಗನ ಜೊತೆಗೆ ಈ ವಿಚಾರವಾಗಿ ಜಗಳವಾಡಿದ್ದಾರೆ. ಈ ವೇಳೆ ತಾಯಿಯ ಕೆನ್ನೆಗೆ

ಲೋಕೇಶ್ ಬಲವಾಗಿ ಬಾರಿಸಿದ್ದಾನ. ಏಟಿನ ರಭಸಕ್ಕೆ ತಾಯಿ ರತ್ನಮ್ಮ ಕಬ್ಬಿಣದ ಬಾಗಿಲಿನ ಮೇಲೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ . 

ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಮೊಳಕಾಲ್ಮೂರು ಪೊಲೀಸರು ಸ್ಥಳಕ್ಕೆ ಆಗಮಿಸಿದ ಆರೋಪಿ ಲೋಕೇಶನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು