10:40 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕುಡಿತಕ್ಕೆ ಹಣ ನೀಡಿಲ್ಲ ಎಂದು ಹತ್ತಬ್ಬೆಯನ್ನೇ ಹೊಡೆದು  ಕೊಂದ ಪಾಪಿ ಪುತ್ರ: ದಿನಾ ಹಣಕ್ಕಾಗಿ ಪೀಡಿಸುತ್ತಿದ್ದ ದುರುಳ

11/07/2021, 08:59

ಶ್ಯಾಮಲಾ ಶಿವಪ್ರಸಾದ್ ಚಳ್ಳಕೆರೆ

info.reporterkarnataka@gmail.com

ಸಾರಾಯಿ ಕುಡಿಯಲು ಹಣ ನೀಡಲಿಲ್ಲ ಎಂದು ಪಾಪಿ ಪುತ್ರನೊಬ್ಬ ಹೆತ್ತಬ್ಬೆಯನ್ನೇ ಹೊಡೆದು ಸಾಯಿಸಿದ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ.

45 ವರ್ಷ ವಯಸ್ಸಿನ ರತ್ನಮ್ಮ(45) ಎಂಬವರು ತನ್ನ 22 ವರ್ಷ ವಯಸ್ಸಿನ ಮಗ ಲೋಕೇಶ್ ನಿಂದ ಹತ್ಯೆಗೀಡಾದ ನತದೃಷ್ಟೆ. ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಆರೋಪಿ ಲೋಕೇಶ್

 ಊಟದ ವಿಚಾರದಲ್ಲಿ ತಾಯಿ ಜತೆ ಜಗಳ ತೆಗೆದಿದ್ದಾನೆ. ಬಳಿಕ ಮದ್ಯ ಸೇವನೆಗೆ ಹಣ ನೀಡುವಂತೆ ತಾಯಿಯನ್ನು ಪೀಡಿಸಿದ್ದಾನೆ. ಪ್ರತೀ ದಿನ ಈತನಿಗೆ ಹಣ ನೀಡಿ ಬೇಸತ್ತಿದ್ದ ತಾಯಿ ಮಗನ ಜೊತೆಗೆ ಈ ವಿಚಾರವಾಗಿ ಜಗಳವಾಡಿದ್ದಾರೆ. ಈ ವೇಳೆ ತಾಯಿಯ ಕೆನ್ನೆಗೆ

ಲೋಕೇಶ್ ಬಲವಾಗಿ ಬಾರಿಸಿದ್ದಾನ. ಏಟಿನ ರಭಸಕ್ಕೆ ತಾಯಿ ರತ್ನಮ್ಮ ಕಬ್ಬಿಣದ ಬಾಗಿಲಿನ ಮೇಲೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ . 

ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಮೊಳಕಾಲ್ಮೂರು ಪೊಲೀಸರು ಸ್ಥಳಕ್ಕೆ ಆಗಮಿಸಿದ ಆರೋಪಿ ಲೋಕೇಶನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು