12:28 PM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

1.48 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

01/03/2023, 21:46

ಸುರತ್ಕಲ್(reporterkarnataka.com):
ಪಕ್ಷಾತೀತ ನೆಲೆಯಲ್ಲಿ ನನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಡಾ ಭರತ್ ಶೆಟ್ಟಿ ವೈ ಹೇಳಿದ್ದಾರೆ.

ಅವರು ಮಹಾನಗರ ವ್ಯಾಪ್ತಿಯ ಕಾಟಿಪಳ್ಳ ಉತ್ತರ ವಾರ್ಡ್‌ನಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ
6ನೇ ವಿಭಾಗದ ರಸ್ತೆ ಅಭಿವೃದ್ಧಿಗೆ 30 ಲಕ್ಷ, ಕೃಷ್ಣ ಮಠ ರಸ್ತೆ ಸಮಗ್ರ ಅಭಿವೃದ್ಧಿಗೆ 19 ಲಕ್ಷ, 6ನೇ ವಿಭಾಗದ ಮುಂದುವರಿದ ಕಾಮಗಾರಿಗೆ 19 ಲಕ್ಷ, ಮತ್ತು ಲೋಕೋಪಯೋಗಿ ಇಲಾಖೆಯಿಂದ ಮಂಜೂರಾತಿಗೊಂಡ
ರಸ್ತೆ ಕಾಂಕ್ರಿಟೀಕರಣಕ್ಕೆ ಮತ್ತು ಚರಂಡಿ ರಚನೆಗೆ 80. ಲಕ್ಷ ಒಟ್ಟು ಸೇರಿ 1.48 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ‌ ನೆರವೇರಿಸಿ ಮಾತನಾಡಿದರು.

ಬಾಕಿಯುಳಿದ ಕೃಷ್ಣಾಪುರ ಮಾರುಕಟ್ಟೆ ಯೋಜನೆಗೆ ಈಗಾಗಲೇ ಅನುದಾನ ಇರಿಸಿ ಕಾಮಗಾರಿ ಪ್ರಾರಂಭಗೊಂಡಿದೆ ಎಂದರು.
ಅನುದಾನ ಒದಗಿಸಿದ ನೆಲೆಯಲ್ಲಿ ಶಾಸಕರನ್ನು‌ ಗ್ರಾಮಸ್ಥರ‌ ನೆಲೆಯಲ್ಲಿ ಮಂಗಳೂರು ಉತ್ತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ
ಭರತ್‌ರಾಜ್ ಕೃಷ್ಣಾಪುರ ಅಭಿನಂದಿಸಿದರು.


ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಪ್ರಮುಖ್ ಹರಿಪ್ರಸಾದ್, ಸಹ ಪ್ರಮುಖ್ ರಾಕೇಶ್, ಬೂತ್ ಅಧ್ಯಕ್ಷ ರವಿ ಪೂಜಾರಿ, ಜಯಚಂದ್ರ, ಮಂಡಲ ಕೋಶಾಧಿಕಾರಿ ಪುಷ್ಪರಾಜ್, ಪ್ರಜ್ವಲ್ ಬೂತ್ ಯುವ ಮೋರ್ಚಾ ಕಾರ್ಯದರ್ಶಿ ದೀಪಕ್ ದೇವಾಡಿಗ, ಸುಕೇಶ್ ಭಟ್, ದಾವೂದ್ ಬಿಎಂಆರ್, ರಮೇಶ್ ಆಚಾರ್ಯ, ಭಾಸ್ಕರ ಸನಿಲ್, ಸುಮಿತ್ರಾ ಆನಂದ, ನಾಗೇಶ್ ಮನೋಜ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು