6:15 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಗಾಜಿನ ಛಾವಣಿಯ ಮಂಗಳೂರು- ಬೆಂಗಳೂರು ಟ್ರೈನ್ ಗೆ ಚಾಲನೆ: ಇನ್ನು ರೈಲಿನಲ್ಲೇ ಕೂತು ಪಶ್ಚಿಮಘಟ್ಟ ಸೊಬಗು ಆಸ್ವಾದಿಸಿ!

11/07/2021, 09:40

ಮಂಗಳೂರು(reporterkarnataka news): ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳನ್ನೊಳಗೊಂಡ ಮಂಗಳೂರು- ಬೆಂಗಳೂರು ರೈಲು ಸಂಚಾರಕ್ಕೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಭಾನುವಾರ ಸಂಸದ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ ತೋರಿಸಿದರು.

 

ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ,ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಹಾಗೂ ರೈಲ್ವೆ ಅಧಿಕಾರಿಗಳು ಭಾಗವಹಿಸಿದ್ದರು.

ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಹೊಂದಿದೆ. ಅಗಲವಾದ, ದೊಡ್ಡ ಕಿಟಕಿಗಳು ಪ್ರಯಾಣಿಕರಿಗೆ ಸ್ಪಷ್ಟವಾದ ನೋಟವನ್ನು ನೀಡುತ್ತದೆ. ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್ಎಚ್ಬಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್ಫಾರ್ಮ್ / ತಂತ್ರಜ್ಞಾನ) ನಲ್ಲಿ ತಯಾರಿಸಲಾಗಿದೆ. ಈ ಬೋಗಿಗಳು ಗಾಜಿನ ಮೇಲ್ಚಾವಣಿ  ಹೊಂದಿದ್ದು, ಇದು ಬೇಸಿಗೆಯಲ್ಲೂ ಆಕಾಶದ ಸ್ಪಷ್ಟ ನೋಟಗಳನ್ನು ನೀಡುತ್ತದೆ. ಇದರಿಂದ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ 56 ಕಿಮೀ. ಉದ್ದದ ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯ, ನದಿ, ತೊರೆ, ಜಲಪಾತಗಳು ಸೊಬಗನ್ನು ಪ್ರಯಾಣಿಕರು ಆಸ್ವಾದಿಸಲು ಸಾಧ್ಯವಾಗುತ್ತದೆ.

ಕೋಚ್ ಗಳಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು, ಎಲ್ಇಡಿ, ಓವನ್ ಮತ್ತು ರೆಫ್ರಿಜರೇಟರ್, ಮಿನಿ ಪ್ಯಾಂಟ್ರಿ, ಮಲ್ಟಿ-ಟೈರ್ಡ್ ಸ್ಟೀಲ್ ಲಗೇಜ್ ಕಪಾಟುಗಳು, ಪ್ರತಿ ಸೀಟಿನಲ್ಲಿ ಮೊಬೈಲ್ ಚಾಜಿರ್ಂಗ್ ಸಾಕೆಟ್ ಗಳಿವೆ. ಇದಲ್ಲದೆ, ಕೋಚ್ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಜೈವಿಕ ಶೌಚಾಲಯಗಳನ್ನು ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು