9:49 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ದೆಹಲಿಯಲ್ಲಿ ಮಿಂಚಿದ ಕೂಡ್ಲಿಗಿ ಶ್ರೀಪೇಟೆ ಬಸವೇಶ್ವರ ಸಂಗೀತ ಸಾಂಸ್ಕೃತಿಕ ಕಲಾ ತಂಡ: ರಾಜಧಾನಿಯಲ್ಲಿ ಹರಿದ ಸಂಗೀತ ಸುಧೆ!

02/03/2023, 12:42

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಪೇಟೆ ಬಸವೇಶ್ವರ ಸಾಂಸ್ಕೃತಿಕ ಹಾಗೂ ಸಂಗೀತ ಕಲಾ ಶಾಲೆ ದೆಹಲಿಯಲ್ಲಿನ ಕರ್ನಾಟಕ ಸಂಘ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮ್ಮ ಸಂಗೀತ ಹಾಗೂ ಕಲಾ ಪ್ರತಿಭೆಯನ್ನು ಪ್ರಸ್ತುತಪಡಿಸಿದೆ.

ದೆಹಲಿಯ ಕರ್ನಾಟಕ ಸಂಘದ ಅಮೃತ ಮಹೋತ್ಸವದ, ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಕಲಾ ಸಂಘದ ಸದಸ್ಯರು
ಪಾಲ್ಗೊಂಡಿದ್ದಾರೆ. ಈ ಮೂಲಕ ಕೂಡ್ಲಿಗಿ ಯ ಹೆಸರನ್ನು ನವ ದೆಹಲಿಯಲ್ಲಿ ಪರಿಚಯಿಸಿದ್ದು ಕಾರ್ಯಕ್ರಮದಲ್ಲಿ ನೆರೆದವರ ಮನದಲ್ಲಿ ಮನೆ ಮಾಡಿದ್ದಾರೆ. ಪ್ರತಿಯಾಗಿ ಕಾರ್ಯಕ್ರಮದ ಆಯೋಜಕರಿಂದ, ಪ್ರಶಂಸನಾ ಅಭಿನಂದನೆ ಪತ್ರ ಹಾಗೂ ಮೆಡಲ್ ಗಳನ್ನು ಪಡೆದಿದ್ದಾರೆ.


ನವದೆಹಲಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ, ಕೂಡ್ಲಿಗಿ ಪಟ್ಟಣದ ಶ್ರೀಪೇಟೆಬಸವೇಸ್ವರ ಸಂಗೀತ ಶಾಲೆ ಸಾಂಸ್ಕ್ರತಿಕ ಕಲಾ ಟ್ರಸ್ಟ್‌ ಪದಾಧಿಕಾರಿಗಳಾದ, ಸಂಗೀತ ಹಾಗೂ ರಂಗಕಲಾವಿದರಾದ ಅಗಸಗಟ್ಟೆ ತಿಂದಪ್ಪ, ತಬಲಾ ವಾದಕರಾದ ಬಾಣದ ನರಸಿಂಹಪ್ಪ, ಡಿ.ವೆಂಕಟೇಶ, ಕುಪ್ಪನಕೇರಿ ಕೆ.ಶಂಕರಪ್ಪ, ರಂಗಕಲಾವಿದರಾದ ಸಾಸಲವಾಡ ಚನ್ನವೀರಸ್ವಾಮಿ, ವಿಭೂತಿ ವೀರಣ್ಣ ನವರು. ಭಾಗವಹಿಸಿದ್ದರು. ತಮ್ಮ ಕಲೆಯ ಮೂಲಕ ನವದೆಹಲಿಯಲ್ಲಿ, ಕೂಡ್ಲಿಗಿ ಯ ಕಲೆಯ ಸುಧೆಯನ್ನು ಹರಿಸಿದ ಕಲಾವಿದರನ್ನು ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಕಲಾವಿದರು ಹಾಗೂ ನಾರೀಕರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಸಮಾಜ ಮುಖಂಡರು. ಜನಪ್ರತಿನಿಧಿಗಳು, ಕಲಾವಿದರ ಸಂಘಟನೆಗಳ ಪದಾಧಿಕಾರಿಗಳು, ತಾಲೂಕಿನ ವಿವಿಧೆಡೆಯ ಕಲಾ ತಂಡದವರು, ಪತ್ರಕರ್ತರು ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು