7:25 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

150ರ ಸಂಭ್ರಮಕ್ಕೆ ಸಿದ್ಧತೆ: ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

02/03/2023, 21:42

ಮಂಗಳೂರು(reporterkarnataka.com): ತುಳುನಾಡಿನ ಕಾರಣೀಕ ಕ್ಷೇತ್ರ ಕಂಕನಾಡಿ ಗರಡಿ ಬ್ರಹ್ಮಬೈದರ್ಕಳ ಕ್ಷೇತ್ರದ 150ನೇ ಗರಡಿ ಸಂಭ್ರಮಕ್ಕೆ ರಾಜ್ಯ ಸರಕಾರ, ಜಿಲ್ಲಾಡಳಿತದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು.
ಕಂಕನಾಡಿ ಗರಡಿ ಕ್ಷೇತ್ರಕ್ಕೆ ಗುರುವಾರ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದ ಜತೆ ಮಾತನಾಡಿದರು.
ಗರಡಿ ಸಂಭ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಸಂಪೂರ್ಣ ವೆಚ್ಚವನ್ನು ಕನ್ನಡ ಸಂಸ್ಕೃತಿಕ ಇಲಾಖೆಯಿಂದ ನೀಡಲಾಗುವುದು. ಜಿಲ್ಲಾಡಳಿತದ ಜತೆ ಆಡಳಿತ ಮಂಡಳಿ ಈಗಾಗಲೇ ಸಭೆ ನಡೆಸಿದ್ದು, ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಮಾ.6ರಂದು ಸಿಎಂ ಗರಡಿಗೆ: ಮಾ.6ರಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗರಡಿ ಕ್ಷೇತ್ರಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಈ ನಿಟ್ಟಿನಲ್ಲೂ ಸಿದ್ಧತೆ ನಡೆಯುತ್ತಿದೆ ಎಂದರು.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಸಚಿವರಿಗೆ ಜಿಲ್ಲಾಡಳಿತ ಸಹಕಾರ ಹಾಗೂ ಇನ್ನಿತರ ತಯಾರಿ ಕುರಿತಂತೆ ಮಾಹಿತಿ ನೀಡಿದರು. ಈ ಸಂದರ್ಭ ಉಪಮೇಯರ್ ಪೂರ್ಣಿಮಾ, ಕಂಕನಾಡಿ ಗರಡಿ ಸಂಭ್ರಮದ ಅಧ್ಯಕ್ಷ ಮೋಹನ್ ಉಜ್ಜೋಡಿ, ಕಾರ್ಪೊರೇಟರ್ ಸಂದೀಪ್ ಗರೋಡಿ, ಲೀಲಾವತಿ, ಕಂಕನಾಡಿ ಗರಡಿ ಕ್ಷೇತ್ರದ ಮೊಕ್ತೇಸರರಾದ ಜಗದೀಪ್ ಡಿ. ಸುವರ್ಣ, ಕಿಶೋರ್ ಮಜಿಲ, ದಿನೇಶ ಅಂಚನ್, ಆರ್ಥಿಕ ಸಮಿತಿ ಸಂಚಾಲಕ ಶರಣ್ ಪಂಪ್‌ವೆಲ್, ವಸಂತ್ ಪೂಜಾರಿ, ಸ್ವಾಗತ ಸಮಿತಿ ಸದಸ್ಯ ಉಮೇಶ್ ಸಾಲ್ಯಾನ್, ಪ್ರಕಾಶ್ ಗರೋಡಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು