1:12 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕಂಕನಾಡಿ ಗರೋಡಿ 150ರ ಸಂಭ್ರಮ: ಮಂಗಳಾದೇವಿಯಿಂದ ಹಸಿರು ಹೊರೆಕಾಣಿಕೆ

03/03/2023, 23:09

ಮಂಗಳೂರು(reporterkarnataka.com):ನಗರದ ಕಂಕನಾಡಿ ಗರೋಡಿ ಕ್ಷೇತ್ರದ 150ರ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಹಸಿರು ಹೊರೆಕಾಣಿಕೆಯನ್ನು ಮಂಗಳಾದೇವಿ ಬಿಲ್ಲವ ಸಂಘದ ವತಿಯಿಂದ ಮಂಗಳಾದೇವಿ ದೇವಸ್ಥಾನದ ವಠಾರದಿಂದ ದೇವಸ್ಥಾನದ ಆಡಳಿತ ಮೊಕ್ತೆಸರಾದ ರಮಾನಾಥ ಹೆಗ್ಡೆ ಮತ್ತು ಅತ್ತಾವರ ಅರಸು ಮುಂಡಿತ್ತಾಯ ದೇವಸ್ಥಾನದ ಆಡಳಿತ ಮೊಕ್ತೇಸರಾದ ವಿದ್ಯಾಧರ ಮತ್ತು ಬಿಲ್ಲವ ಸಂಘದ ಸದಸ್ಯರು ಸೇರಿಕೊಂಡು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಹೊರೆಕಾಣಿಕೆಗೆ ಬೊಳಾರ ಮಂಗಳಾ ಕ್ಯಾಟರಿಂಗ್ ಮಾಲಕರಾದ ಸತೀಶ್ ಮತ್ತು ರೊಹಿದಾಸ್ ಹಾಗೂ ಬೊಳಾರ ಮಾರಿಗುಡಿ ಕರಸೇವಕರ ಭಕ್ತ ವ್ರಂದ ಹಾಗೂ ಆಸು ಪಾಸಿನ ಸಂಘ ಸಂಸ್ತೆಗಳು ಹೊರೆಕಾಣಿಕೆ ಯನ್ನು ನೀಡಿ ಸಹಕರಿಸಿದ್ದಾರೆ.

ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಬಿ. ರಮಾನಂದ ಪೂಜಾರಿ ವಂದಿಸಿದರು.
ಹಸಿರು ಹೊರ ಕಾಣಿಕೆಯ ಮೆರವಣಿಗೆಗೆ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಚಾಲನೆ ನೀಡಿದರು. ಹಿರಿಯ ಸದಸ್ಯರಾದ ಕೆ.ಜಿ. ವಿಮಲಾ ಮೋನಪ್ಪ ಅಂಚನ್ ಹಾಗೂ ಸಲಹೆಗಾರರಾದ ವೇಣುಗೋಪಾಲ್, ಸಂಚಾಲಕ ದಿನೇಶ್ ಕುಮಾರ್ ತರುಣ್ ಮಹಿಳಾ ಘಟಕದ ಎಲ್ಲಾ ಸದಸ್ಯರು ಹಾಗೂ ಸಂಘದ ಎಲ್ಲಾ ಸದಸ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು