3:42 PM Monday13 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಕಂಕನಾಡಿ ಗರೋಡಿ 150ರ ಸಂಭ್ರಮ: ಮಂಗಳಾದೇವಿಯಿಂದ ಹಸಿರು ಹೊರೆಕಾಣಿಕೆ

03/03/2023, 23:09

ಮಂಗಳೂರು(reporterkarnataka.com):ನಗರದ ಕಂಕನಾಡಿ ಗರೋಡಿ ಕ್ಷೇತ್ರದ 150ರ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಹಸಿರು ಹೊರೆಕಾಣಿಕೆಯನ್ನು ಮಂಗಳಾದೇವಿ ಬಿಲ್ಲವ ಸಂಘದ ವತಿಯಿಂದ ಮಂಗಳಾದೇವಿ ದೇವಸ್ಥಾನದ ವಠಾರದಿಂದ ದೇವಸ್ಥಾನದ ಆಡಳಿತ ಮೊಕ್ತೆಸರಾದ ರಮಾನಾಥ ಹೆಗ್ಡೆ ಮತ್ತು ಅತ್ತಾವರ ಅರಸು ಮುಂಡಿತ್ತಾಯ ದೇವಸ್ಥಾನದ ಆಡಳಿತ ಮೊಕ್ತೇಸರಾದ ವಿದ್ಯಾಧರ ಮತ್ತು ಬಿಲ್ಲವ ಸಂಘದ ಸದಸ್ಯರು ಸೇರಿಕೊಂಡು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಹೊರೆಕಾಣಿಕೆಗೆ ಬೊಳಾರ ಮಂಗಳಾ ಕ್ಯಾಟರಿಂಗ್ ಮಾಲಕರಾದ ಸತೀಶ್ ಮತ್ತು ರೊಹಿದಾಸ್ ಹಾಗೂ ಬೊಳಾರ ಮಾರಿಗುಡಿ ಕರಸೇವಕರ ಭಕ್ತ ವ್ರಂದ ಹಾಗೂ ಆಸು ಪಾಸಿನ ಸಂಘ ಸಂಸ್ತೆಗಳು ಹೊರೆಕಾಣಿಕೆ ಯನ್ನು ನೀಡಿ ಸಹಕರಿಸಿದ್ದಾರೆ.

ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಬಿ. ರಮಾನಂದ ಪೂಜಾರಿ ವಂದಿಸಿದರು.
ಹಸಿರು ಹೊರ ಕಾಣಿಕೆಯ ಮೆರವಣಿಗೆಗೆ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಚಾಲನೆ ನೀಡಿದರು. ಹಿರಿಯ ಸದಸ್ಯರಾದ ಕೆ.ಜಿ. ವಿಮಲಾ ಮೋನಪ್ಪ ಅಂಚನ್ ಹಾಗೂ ಸಲಹೆಗಾರರಾದ ವೇಣುಗೋಪಾಲ್, ಸಂಚಾಲಕ ದಿನೇಶ್ ಕುಮಾರ್ ತರುಣ್ ಮಹಿಳಾ ಘಟಕದ ಎಲ್ಲಾ ಸದಸ್ಯರು ಹಾಗೂ ಸಂಘದ ಎಲ್ಲಾ ಸದಸ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು