2:42 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕಂಕನಾಡಿ ಗರೋಡಿ 150ರ ಸಂಭ್ರಮ: ಮಂಗಳಾದೇವಿಯಿಂದ ಹಸಿರು ಹೊರೆಕಾಣಿಕೆ

03/03/2023, 23:09

ಮಂಗಳೂರು(reporterkarnataka.com):ನಗರದ ಕಂಕನಾಡಿ ಗರೋಡಿ ಕ್ಷೇತ್ರದ 150ರ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಹಸಿರು ಹೊರೆಕಾಣಿಕೆಯನ್ನು ಮಂಗಳಾದೇವಿ ಬಿಲ್ಲವ ಸಂಘದ ವತಿಯಿಂದ ಮಂಗಳಾದೇವಿ ದೇವಸ್ಥಾನದ ವಠಾರದಿಂದ ದೇವಸ್ಥಾನದ ಆಡಳಿತ ಮೊಕ್ತೆಸರಾದ ರಮಾನಾಥ ಹೆಗ್ಡೆ ಮತ್ತು ಅತ್ತಾವರ ಅರಸು ಮುಂಡಿತ್ತಾಯ ದೇವಸ್ಥಾನದ ಆಡಳಿತ ಮೊಕ್ತೇಸರಾದ ವಿದ್ಯಾಧರ ಮತ್ತು ಬಿಲ್ಲವ ಸಂಘದ ಸದಸ್ಯರು ಸೇರಿಕೊಂಡು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಹೊರೆಕಾಣಿಕೆಗೆ ಬೊಳಾರ ಮಂಗಳಾ ಕ್ಯಾಟರಿಂಗ್ ಮಾಲಕರಾದ ಸತೀಶ್ ಮತ್ತು ರೊಹಿದಾಸ್ ಹಾಗೂ ಬೊಳಾರ ಮಾರಿಗುಡಿ ಕರಸೇವಕರ ಭಕ್ತ ವ್ರಂದ ಹಾಗೂ ಆಸು ಪಾಸಿನ ಸಂಘ ಸಂಸ್ತೆಗಳು ಹೊರೆಕಾಣಿಕೆ ಯನ್ನು ನೀಡಿ ಸಹಕರಿಸಿದ್ದಾರೆ.

ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಬಿ. ರಮಾನಂದ ಪೂಜಾರಿ ವಂದಿಸಿದರು.
ಹಸಿರು ಹೊರ ಕಾಣಿಕೆಯ ಮೆರವಣಿಗೆಗೆ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಚಾಲನೆ ನೀಡಿದರು. ಹಿರಿಯ ಸದಸ್ಯರಾದ ಕೆ.ಜಿ. ವಿಮಲಾ ಮೋನಪ್ಪ ಅಂಚನ್ ಹಾಗೂ ಸಲಹೆಗಾರರಾದ ವೇಣುಗೋಪಾಲ್, ಸಂಚಾಲಕ ದಿನೇಶ್ ಕುಮಾರ್ ತರುಣ್ ಮಹಿಳಾ ಘಟಕದ ಎಲ್ಲಾ ಸದಸ್ಯರು ಹಾಗೂ ಸಂಘದ ಎಲ್ಲಾ ಸದಸ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು