12:52 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕಂಕನಾಡಿ ಗರೋಡಿ 150ರ ಸಂಭ್ರಮ: ಮಂಗಳಾದೇವಿಯಿಂದ ಹಸಿರು ಹೊರೆಕಾಣಿಕೆ

03/03/2023, 23:09

ಮಂಗಳೂರು(reporterkarnataka.com):ನಗರದ ಕಂಕನಾಡಿ ಗರೋಡಿ ಕ್ಷೇತ್ರದ 150ರ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಹಸಿರು ಹೊರೆಕಾಣಿಕೆಯನ್ನು ಮಂಗಳಾದೇವಿ ಬಿಲ್ಲವ ಸಂಘದ ವತಿಯಿಂದ ಮಂಗಳಾದೇವಿ ದೇವಸ್ಥಾನದ ವಠಾರದಿಂದ ದೇವಸ್ಥಾನದ ಆಡಳಿತ ಮೊಕ್ತೆಸರಾದ ರಮಾನಾಥ ಹೆಗ್ಡೆ ಮತ್ತು ಅತ್ತಾವರ ಅರಸು ಮುಂಡಿತ್ತಾಯ ದೇವಸ್ಥಾನದ ಆಡಳಿತ ಮೊಕ್ತೇಸರಾದ ವಿದ್ಯಾಧರ ಮತ್ತು ಬಿಲ್ಲವ ಸಂಘದ ಸದಸ್ಯರು ಸೇರಿಕೊಂಡು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಹೊರೆಕಾಣಿಕೆಗೆ ಬೊಳಾರ ಮಂಗಳಾ ಕ್ಯಾಟರಿಂಗ್ ಮಾಲಕರಾದ ಸತೀಶ್ ಮತ್ತು ರೊಹಿದಾಸ್ ಹಾಗೂ ಬೊಳಾರ ಮಾರಿಗುಡಿ ಕರಸೇವಕರ ಭಕ್ತ ವ್ರಂದ ಹಾಗೂ ಆಸು ಪಾಸಿನ ಸಂಘ ಸಂಸ್ತೆಗಳು ಹೊರೆಕಾಣಿಕೆ ಯನ್ನು ನೀಡಿ ಸಹಕರಿಸಿದ್ದಾರೆ.

ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಬಿ. ರಮಾನಂದ ಪೂಜಾರಿ ವಂದಿಸಿದರು.
ಹಸಿರು ಹೊರ ಕಾಣಿಕೆಯ ಮೆರವಣಿಗೆಗೆ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಚಾಲನೆ ನೀಡಿದರು. ಹಿರಿಯ ಸದಸ್ಯರಾದ ಕೆ.ಜಿ. ವಿಮಲಾ ಮೋನಪ್ಪ ಅಂಚನ್ ಹಾಗೂ ಸಲಹೆಗಾರರಾದ ವೇಣುಗೋಪಾಲ್, ಸಂಚಾಲಕ ದಿನೇಶ್ ಕುಮಾರ್ ತರುಣ್ ಮಹಿಳಾ ಘಟಕದ ಎಲ್ಲಾ ಸದಸ್ಯರು ಹಾಗೂ ಸಂಘದ ಎಲ್ಲಾ ಸದಸ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು