5:06 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಕೆ.ಆರ್. ಪೇಟೆ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷರಾಗಿ ಹೇಮಾ ಅವಿರೋಧ ಆಯ್ಕೆ

04/03/2023, 11:27

ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ

info.reporterkarnataka@gmail.com

ಕೆ. ಆರ್. ಪೇಟೆ ತಾಲೂಕಿನ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಹೇಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷರಾಗಿದ್ದ ಶಶಿಧರ್ ನೀಡಿದ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಹೇಮಾ ಅವರು ಬಿಟ್ಟರೆ ಉಳಿದ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಹೇಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಘೋಷಿಸಿದರು.

ನೂತನ ಅಧ್ಯಕ್ಷೆ ಅಭಿನಂದಿಸಿ ಮಾತನಾಡಿದ ಬೀರುವಳ್ಳಿ ಸೊಸೈಟಿ ನಿರ್ದೇಶಕ ಲಕ್ಷ್ಮೇಗೌಡ ಮಳೆಯನ್ನೇ ನಂಬಿಕೊಂಡು ವ್ಯವಸಾಯ ಮಾಡುವವರ ಪರಿಸ್ಥಿತಿ ಕಷ್ಟಕರವಾಗಿದೆ.ಈ ಸಂದರ್ಭದಲ್ಲಿ ಹೈನುವಾರಿಕೆ ನೆರವಾಗಲಿದೆ. ಹೈನುಗಾರಿಕೆಯು ಬಹಳ ದೊಡ್ಡ ಉದ್ಯಮವಾಗಿ ಬೆಳೆದು ಲಕ್ಷಾಂತರ ಜನರಿಗೆ ಉದ್ಯೋಗವನ್ನು ಕಲ್ಪಿಸಿದೆ. ಹೈನುಗಾರಿಕೆಯಿಂದ ಆದಾಯ ಕಾಣಬಹುದಾಗಿದೆ.ಈ ಅವಕಾಶ ಬಳಸಿಕೊಳ್ಳಬೇಕು ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ನಿರ್ದೇಶಕರು ಸಂಘದಲ್ಲಿ ರಾಜಕಾರಣ ಬೆರಸದೇ ಪಕ್ಷಾತೀತವಾಗಿ ಪಾಲ್ಗೊಂಡು ಸಂಘದ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಸಲಹೆ ನೀಡಿದರು.
ಬಳಿಕ ಮಾತನಾಡಿ ನೂತನ ಅಧ್ಯಕ್ಷ ಹೇಮ ನನ್ನನ್ನು ಅವಿರೋಧವಾಗಿ ಅಧ್ಯಕ್ಷರಾಗಲು ಸಹಕರಿಸಿದ ನಮ್ಮ ಗ್ರಾಮದ ಮುಖಂಡರು ಹಾಗೂ ಸಂಘದ ಸದಸ್ಯರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು.ಷೇರುದಾರರು ಸಂಘಕ್ಕೆ ಉತ್ತಮ ಗುಣಮಟ್ಟದ ಹಾಲನ್ನು ಸರಬರಾಜು ಮಾಡಬೇಕು.ಸಂಘವು ಉಳಿದರೆ ನಾವೆಲ್ಲರೂ ಉಳಿದಂತೆ.ಆದ್ದರಿಂದ ನನ್ನ ಆಡಳಿತ ಅವಧಿಯಲ್ಲಿ ಎಲ್ಲರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ರೂಪ ಕೃಷ್ಣೆಗೌಡ,ಬಿರುವಳ್ಳಿ ಮುಖಂಡ ಹರೀಶ್,ಅಕ್ಕಿಹೆಬ್ಬಾಳು ಹೋಬಳಿ ಜೆಡಿಎಸ್ ಬಸವಲಿಂಗಪ್ಪ,ಬೀರುವಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಿರೇಗೌಡ, ದೊಡ್ಡೇಗೌಡ, ಪರಶುರಾಮ್, ಸಂಘದ ಉಪಾಧ್ಯಕ್ಷ ಸಾವಿತ್ರಮ್ಮ ನಿರ್ದೇಶಕರುಗಳಾದ ಶಶಿಧರ್ ಬಿ ಜೆ, ಜವರೇಗೌಡ ಬಿ ಸಿ, ಶಿವರಾಮೇಗೌಡ ಬಿ ಎಸ್, ವಿರೂಪಾಕ್ಷಪ್ಪ ಎ ಬಿ, ಬಲ್ಲೇಶ್ ಬಿ ಎಲ್, ಧನಂಜಯ ಬಿ ಎನ್, ರುಕ್ಮಿಣಮ್ಮ, ನೀಲಶೆಟ್ಟಿ, ವಸಂತಮ್ಮ, ದ್ಯಾವನಾಯಕ, ಕಾರ್ಯದರ್ಶಿ ಯೋಗೇಶ್ ಬಿ ಆರ್, ಸಿಬ್ಬಂದಿಗಳಾದ ಯೋಗೇಂದ್ರ, ರಕ್ಷಿತ್, ಸಣ್ಣ ತಾಯಮ್ಮ, ಸೇರಿದಂತೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು