5:05 PM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕೆ.ಆರ್. ಪೇಟೆ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷರಾಗಿ ಹೇಮಾ ಅವಿರೋಧ ಆಯ್ಕೆ

04/03/2023, 11:27

ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ

info.reporterkarnataka@gmail.com

ಕೆ. ಆರ್. ಪೇಟೆ ತಾಲೂಕಿನ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಹೇಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷರಾಗಿದ್ದ ಶಶಿಧರ್ ನೀಡಿದ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಹೇಮಾ ಅವರು ಬಿಟ್ಟರೆ ಉಳಿದ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಹೇಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಘೋಷಿಸಿದರು.

ನೂತನ ಅಧ್ಯಕ್ಷೆ ಅಭಿನಂದಿಸಿ ಮಾತನಾಡಿದ ಬೀರುವಳ್ಳಿ ಸೊಸೈಟಿ ನಿರ್ದೇಶಕ ಲಕ್ಷ್ಮೇಗೌಡ ಮಳೆಯನ್ನೇ ನಂಬಿಕೊಂಡು ವ್ಯವಸಾಯ ಮಾಡುವವರ ಪರಿಸ್ಥಿತಿ ಕಷ್ಟಕರವಾಗಿದೆ.ಈ ಸಂದರ್ಭದಲ್ಲಿ ಹೈನುವಾರಿಕೆ ನೆರವಾಗಲಿದೆ. ಹೈನುಗಾರಿಕೆಯು ಬಹಳ ದೊಡ್ಡ ಉದ್ಯಮವಾಗಿ ಬೆಳೆದು ಲಕ್ಷಾಂತರ ಜನರಿಗೆ ಉದ್ಯೋಗವನ್ನು ಕಲ್ಪಿಸಿದೆ. ಹೈನುಗಾರಿಕೆಯಿಂದ ಆದಾಯ ಕಾಣಬಹುದಾಗಿದೆ.ಈ ಅವಕಾಶ ಬಳಸಿಕೊಳ್ಳಬೇಕು ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ನಿರ್ದೇಶಕರು ಸಂಘದಲ್ಲಿ ರಾಜಕಾರಣ ಬೆರಸದೇ ಪಕ್ಷಾತೀತವಾಗಿ ಪಾಲ್ಗೊಂಡು ಸಂಘದ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಸಲಹೆ ನೀಡಿದರು.
ಬಳಿಕ ಮಾತನಾಡಿ ನೂತನ ಅಧ್ಯಕ್ಷ ಹೇಮ ನನ್ನನ್ನು ಅವಿರೋಧವಾಗಿ ಅಧ್ಯಕ್ಷರಾಗಲು ಸಹಕರಿಸಿದ ನಮ್ಮ ಗ್ರಾಮದ ಮುಖಂಡರು ಹಾಗೂ ಸಂಘದ ಸದಸ್ಯರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು.ಷೇರುದಾರರು ಸಂಘಕ್ಕೆ ಉತ್ತಮ ಗುಣಮಟ್ಟದ ಹಾಲನ್ನು ಸರಬರಾಜು ಮಾಡಬೇಕು.ಸಂಘವು ಉಳಿದರೆ ನಾವೆಲ್ಲರೂ ಉಳಿದಂತೆ.ಆದ್ದರಿಂದ ನನ್ನ ಆಡಳಿತ ಅವಧಿಯಲ್ಲಿ ಎಲ್ಲರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ರೂಪ ಕೃಷ್ಣೆಗೌಡ,ಬಿರುವಳ್ಳಿ ಮುಖಂಡ ಹರೀಶ್,ಅಕ್ಕಿಹೆಬ್ಬಾಳು ಹೋಬಳಿ ಜೆಡಿಎಸ್ ಬಸವಲಿಂಗಪ್ಪ,ಬೀರುವಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಿರೇಗೌಡ, ದೊಡ್ಡೇಗೌಡ, ಪರಶುರಾಮ್, ಸಂಘದ ಉಪಾಧ್ಯಕ್ಷ ಸಾವಿತ್ರಮ್ಮ ನಿರ್ದೇಶಕರುಗಳಾದ ಶಶಿಧರ್ ಬಿ ಜೆ, ಜವರೇಗೌಡ ಬಿ ಸಿ, ಶಿವರಾಮೇಗೌಡ ಬಿ ಎಸ್, ವಿರೂಪಾಕ್ಷಪ್ಪ ಎ ಬಿ, ಬಲ್ಲೇಶ್ ಬಿ ಎಲ್, ಧನಂಜಯ ಬಿ ಎನ್, ರುಕ್ಮಿಣಮ್ಮ, ನೀಲಶೆಟ್ಟಿ, ವಸಂತಮ್ಮ, ದ್ಯಾವನಾಯಕ, ಕಾರ್ಯದರ್ಶಿ ಯೋಗೇಶ್ ಬಿ ಆರ್, ಸಿಬ್ಬಂದಿಗಳಾದ ಯೋಗೇಂದ್ರ, ರಕ್ಷಿತ್, ಸಣ್ಣ ತಾಯಮ್ಮ, ಸೇರಿದಂತೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು