1:53 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೆ.ಆರ್. ಪೇಟೆ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷರಾಗಿ ಹೇಮಾ ಅವಿರೋಧ ಆಯ್ಕೆ

04/03/2023, 11:27

ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ

info.reporterkarnataka@gmail.com

ಕೆ. ಆರ್. ಪೇಟೆ ತಾಲೂಕಿನ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಹೇಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷರಾಗಿದ್ದ ಶಶಿಧರ್ ನೀಡಿದ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಹೇಮಾ ಅವರು ಬಿಟ್ಟರೆ ಉಳಿದ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಹೇಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಘೋಷಿಸಿದರು.

ನೂತನ ಅಧ್ಯಕ್ಷೆ ಅಭಿನಂದಿಸಿ ಮಾತನಾಡಿದ ಬೀರುವಳ್ಳಿ ಸೊಸೈಟಿ ನಿರ್ದೇಶಕ ಲಕ್ಷ್ಮೇಗೌಡ ಮಳೆಯನ್ನೇ ನಂಬಿಕೊಂಡು ವ್ಯವಸಾಯ ಮಾಡುವವರ ಪರಿಸ್ಥಿತಿ ಕಷ್ಟಕರವಾಗಿದೆ.ಈ ಸಂದರ್ಭದಲ್ಲಿ ಹೈನುವಾರಿಕೆ ನೆರವಾಗಲಿದೆ. ಹೈನುಗಾರಿಕೆಯು ಬಹಳ ದೊಡ್ಡ ಉದ್ಯಮವಾಗಿ ಬೆಳೆದು ಲಕ್ಷಾಂತರ ಜನರಿಗೆ ಉದ್ಯೋಗವನ್ನು ಕಲ್ಪಿಸಿದೆ. ಹೈನುಗಾರಿಕೆಯಿಂದ ಆದಾಯ ಕಾಣಬಹುದಾಗಿದೆ.ಈ ಅವಕಾಶ ಬಳಸಿಕೊಳ್ಳಬೇಕು ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ನಿರ್ದೇಶಕರು ಸಂಘದಲ್ಲಿ ರಾಜಕಾರಣ ಬೆರಸದೇ ಪಕ್ಷಾತೀತವಾಗಿ ಪಾಲ್ಗೊಂಡು ಸಂಘದ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಸಲಹೆ ನೀಡಿದರು.
ಬಳಿಕ ಮಾತನಾಡಿ ನೂತನ ಅಧ್ಯಕ್ಷ ಹೇಮ ನನ್ನನ್ನು ಅವಿರೋಧವಾಗಿ ಅಧ್ಯಕ್ಷರಾಗಲು ಸಹಕರಿಸಿದ ನಮ್ಮ ಗ್ರಾಮದ ಮುಖಂಡರು ಹಾಗೂ ಸಂಘದ ಸದಸ್ಯರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು.ಷೇರುದಾರರು ಸಂಘಕ್ಕೆ ಉತ್ತಮ ಗುಣಮಟ್ಟದ ಹಾಲನ್ನು ಸರಬರಾಜು ಮಾಡಬೇಕು.ಸಂಘವು ಉಳಿದರೆ ನಾವೆಲ್ಲರೂ ಉಳಿದಂತೆ.ಆದ್ದರಿಂದ ನನ್ನ ಆಡಳಿತ ಅವಧಿಯಲ್ಲಿ ಎಲ್ಲರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ರೂಪ ಕೃಷ್ಣೆಗೌಡ,ಬಿರುವಳ್ಳಿ ಮುಖಂಡ ಹರೀಶ್,ಅಕ್ಕಿಹೆಬ್ಬಾಳು ಹೋಬಳಿ ಜೆಡಿಎಸ್ ಬಸವಲಿಂಗಪ್ಪ,ಬೀರುವಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಿರೇಗೌಡ, ದೊಡ್ಡೇಗೌಡ, ಪರಶುರಾಮ್, ಸಂಘದ ಉಪಾಧ್ಯಕ್ಷ ಸಾವಿತ್ರಮ್ಮ ನಿರ್ದೇಶಕರುಗಳಾದ ಶಶಿಧರ್ ಬಿ ಜೆ, ಜವರೇಗೌಡ ಬಿ ಸಿ, ಶಿವರಾಮೇಗೌಡ ಬಿ ಎಸ್, ವಿರೂಪಾಕ್ಷಪ್ಪ ಎ ಬಿ, ಬಲ್ಲೇಶ್ ಬಿ ಎಲ್, ಧನಂಜಯ ಬಿ ಎನ್, ರುಕ್ಮಿಣಮ್ಮ, ನೀಲಶೆಟ್ಟಿ, ವಸಂತಮ್ಮ, ದ್ಯಾವನಾಯಕ, ಕಾರ್ಯದರ್ಶಿ ಯೋಗೇಶ್ ಬಿ ಆರ್, ಸಿಬ್ಬಂದಿಗಳಾದ ಯೋಗೇಂದ್ರ, ರಕ್ಷಿತ್, ಸಣ್ಣ ತಾಯಮ್ಮ, ಸೇರಿದಂತೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು