4:02 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಹಿಳೆಯ ಮೊಬೈಲ್ ಕಿತ್ತು ಪರಾರಿಯಾದ ಆರೋಪಿ ಬಂಧನ: ಬಣಕಲ್ ಪೊಲೀಸರ ಕಾರ್ಯಾಚರಣೆ

04/03/2023, 20:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತ್ರಿಪುರ ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಮೊಬೈಲ್ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ.
ತ್ರಿಪುರದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿದಿ ಉಮಾ ಎಂಬುವವರು 2021 ರ ಆಗಸ್ಟ್ ನಲ್ಲಿ ರಾತ್ರಿ ಸಂಘದ ಕೆಲಸ ಮುಗಿಸಿಕೊಂಡು ತ್ರಿಪುರ ಗ್ರಾಮದ ರಸ್ತೆಯಲ್ಲಿ ಒಬ್ಬರೇ ಹೋಗುತ್ತಿರುವಾಗ ಆರೋಪಿ ಮಣಿ ಹಿಂದಿನಿಂದ ಬಂದು ಉಮಾ ರವರ ಬಾಯಿಯನ್ನು ಗಟ್ಟಿಯಾಗಿ ಅದುಮಿ ಹಿಡಿದು ಎಳೆದಾಡಿ 12 ಸಾವಿರ ರೂ ಬೆಲೆಬಾಳುವ ಮೊಬೈಲ್ ಕಿತ್ತುಕೊಂಡು ಹೋಗಿದ್ದು ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಘಟನೆ ನಂತರ ತ್ರಿಪುರ ಗ್ರಾಮದ ಸುತ್ತಮುತ್ತ ಹೆಣ್ಣು ಮಕ್ಕಳು ಓಡಾಡಲು ಭಯಪಡುತ್ತಿದ್ದರು. ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಒಂದು ವರ್ಷ ಐದು ತಿಂಗಳಿಂದ ಸತತ ಪ್ರಯತ್ನದಿಂದ ಆರೋಪಿ ತ್ರಿಪುರದ ಮಣಿ ಎಂಬುವವರನ್ನು ಬಂಧಿಸಿದ್ದಾರೆ. ಕಾರ್ಯಚರಣೆಯಲ್ಲಿ ಮೂಡಿಗೆರೆಯ ವೃತ್ತ ನಿರೀಕ್ಷಕರು ಸೋಮಶೇಖರ್, ಸೋಮೇಗೌಡ, ಸಿಬ್ಬಂದಿಗಳಾದ ಗಿರೀಶ್, ಮನು, ಜಗದೀಶ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು