3:44 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಹಿಳೆಯ ಮೊಬೈಲ್ ಕಿತ್ತು ಪರಾರಿಯಾದ ಆರೋಪಿ ಬಂಧನ: ಬಣಕಲ್ ಪೊಲೀಸರ ಕಾರ್ಯಾಚರಣೆ

04/03/2023, 20:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತ್ರಿಪುರ ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಮೊಬೈಲ್ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ.
ತ್ರಿಪುರದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿದಿ ಉಮಾ ಎಂಬುವವರು 2021 ರ ಆಗಸ್ಟ್ ನಲ್ಲಿ ರಾತ್ರಿ ಸಂಘದ ಕೆಲಸ ಮುಗಿಸಿಕೊಂಡು ತ್ರಿಪುರ ಗ್ರಾಮದ ರಸ್ತೆಯಲ್ಲಿ ಒಬ್ಬರೇ ಹೋಗುತ್ತಿರುವಾಗ ಆರೋಪಿ ಮಣಿ ಹಿಂದಿನಿಂದ ಬಂದು ಉಮಾ ರವರ ಬಾಯಿಯನ್ನು ಗಟ್ಟಿಯಾಗಿ ಅದುಮಿ ಹಿಡಿದು ಎಳೆದಾಡಿ 12 ಸಾವಿರ ರೂ ಬೆಲೆಬಾಳುವ ಮೊಬೈಲ್ ಕಿತ್ತುಕೊಂಡು ಹೋಗಿದ್ದು ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಘಟನೆ ನಂತರ ತ್ರಿಪುರ ಗ್ರಾಮದ ಸುತ್ತಮುತ್ತ ಹೆಣ್ಣು ಮಕ್ಕಳು ಓಡಾಡಲು ಭಯಪಡುತ್ತಿದ್ದರು. ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಒಂದು ವರ್ಷ ಐದು ತಿಂಗಳಿಂದ ಸತತ ಪ್ರಯತ್ನದಿಂದ ಆರೋಪಿ ತ್ರಿಪುರದ ಮಣಿ ಎಂಬುವವರನ್ನು ಬಂಧಿಸಿದ್ದಾರೆ. ಕಾರ್ಯಚರಣೆಯಲ್ಲಿ ಮೂಡಿಗೆರೆಯ ವೃತ್ತ ನಿರೀಕ್ಷಕರು ಸೋಮಶೇಖರ್, ಸೋಮೇಗೌಡ, ಸಿಬ್ಬಂದಿಗಳಾದ ಗಿರೀಶ್, ಮನು, ಜಗದೀಶ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು