5:22 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ಖಗೋಳ ಶಾಸ್ತ್ರಜ್ಞ ಪ್ರೊ. ಜಯಂತ್ ಆಚಾರ್ಯ ಇನ್ನಿಲ್ಲ

14/05/2021, 12:48

ಮಂಗಳೂರು(reporterkarnataka news):

ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ರಸಾಯನಶಾಸ್ತ್ರ ಪ್ರಾಧ್ಯಾಪಕ ಪ್ರೊ.ಜಯಂತ್ ಆಚಾರ್ಯ (67) ಹೃದಯಾಘಾತ ದಿಂದ ಮಂಗಳೂರಿನ ಕುಲಶೇಖರ ಸಮೀಪದ ಸರಿಪಳ್ಳದಲ್ಲಿರುವ ಮನೆಯಲ್ಲಿ ನಿಧನರಾದರು.    

ಪ್ರೊ.ಜಯಂತ್  ಸುಮಾರು ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಮಂಗಳೂರಿನ ಅನೇಕರಿಗೆ ಖಗೋಲಶಾಸ್ತ್ರದ ಅಭಿರುಚಿ ಹುಟ್ಟಿಸಿದ್ದರು.

ಗ್ರಹಣ ಆಗಲೀ, ಧೂಮಕೇತು ಬರಲಿ ಆಕಾಶದ ವಿಸ್ಮಯಗಳತ್ತ ತಮ್ಮ ವಿದ್ಯಾರ್ಥಿಗಳು ಹಾಗೂ ಆಸಕ್ತರಿಗೆ ಅದರ ಪರಿಚಯ ಮಾಡಿಸುತ್ತಿದ್ದವರು. ಅದಕ್ಕೆಂದೇ ನಗರದಿಂದ ತುಸುದೂರ ಸರಿಪಲ್ಲ ಎಂಬಲ್ಲಿ ಮನೆ ಮಾಡಿಕೊಂಡು ಆಸಕ್ತರಿಗೆ ಆಕಾಶದ ಪರಿಚಯ ಮಾಡಿಸುತ್ತಿದ್ದರು. ಮಂಗಳೂರು ಹವ್ಯಾಸಿ ಖಗೋಲವೀಕ್ಷಕರ ಸಂಘದ ಮೂಲಕ ಅನೇಕ ಚಟುವಟಿಕೆ ಮಾಡುತ್ತಾ ಕ್ರಿಯಾಶಿಲರಾಗಿದ್ದವರು. 

ಸಂಗೀತ, ಯಕ್ಷಗಾನ, ನಾಟಕ, ಚಾರಣ ಮೊದಲಾದ ಹಲವಾರು ಆಸಕ್ತಿಗಳನ್ನು ಹೊಂದಿದ್ದವರು.  ಕಿರಿಯರ ಜೊತೆ ಸದಾ ಸ್ನೇಹಭಾವದಿಂದ ಇರುತ್ತಿದ್ದ ಸರಳ ಸಜ್ಜನ. Sunday science school ನಂತಹ ಚಟುವಟಿಕೆಗಳ ಮೂಲಕ ಮಕ್ಕಳಿಗೆ ನಿಜವಾದ ಅರ್ಥದಲ್ಲಿ ವಿಜ್ಞಾನ ಕಲಿಕೆ ಎಂಬ ಪ್ರಯೋಗವನ್ನು ಹಲವಾರು ವರ್ಷ ನಡೆಸಿದವರು.

ಬಗಲಿಗೊಂದು ಚೀಲ, ಕೈಯಲ್ಲೊಂದು single fold ಛತ್ರಿ, ಚೌಕ ಫ್ರೇಮಿನ ಕನ್ನಡಕ, ಸದಾ ನಗುಮುಖದ ಶಾಂತ ವ್ಯಕ್ತಿತ್ವದ ಇವರು 

 ತಾಯಿ, ಪತ್ನಿ, ಎರಡು ಪುತ್ರಿಯರು, ಅಳಿಯ, ಸಹೋದರ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು