8:28 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆ ಚುನಾವಣೆ: ರಮಾನಾಥ ರೈ, ಸೊರಕೆ, ಲೋಬೊಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಖಚಿತ

06/03/2023, 18:50

ಮಂಗಳೂರು(reporterkarnataka.com): ರಾಜ್ಯದಲ್ಲಿ ಚುನಾವಣೆಯ ಕಾವು ನಿಧಾನವಾಗಿ ಏರಲಾರಂಭಿಸಿದೆ. ಕರಾವಳಿ ಜಿಲ್ಲೆಯಲ್ಲಿ ಚುನಾವಣೆ ಬಿಸಿ ಜತೆಗೆ ತಾಪಮಾನ ಕೂಡ ಏರಲಾರಂಭಿಸಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬಹುತೇಕ ಹಾಲಿ ಶಾಸಕರನ್ನು ಮತ್ತೆ ಅಖಾಡಕ್ಕಿಳಿಸಲು ಆಡಳಿತರೂಢ ಬಿಜೆಪಿ ಸಿದ್ಧತೆ ನಡೆಸುತ್ತಿದ್ದರೆ, ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಭಾರಿ ಪೈಪೋಟಿ ನಡೆದಿದೆ. ಈ ಹೋರಾಟದ ನಡುವೆ ಮಾಜಿ ಸಚಿವರಾದ ಬಿ. ರಮಾನಾಥ ರೈ, ವಿನಯ ಕುಮಾರ್ ಸೊರಕೆ ಹಾಗೂ ಜೆ. ಆರ್. ಲೋಬೊ ಅವರಿಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಖಚಿತವಾಗಿದೆ.

ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕರಾದ ಬಿ. ರಮಾನಾಥ ರೈ ಅವರು ಬಂಟ್ವಾಳ ಕ್ಷೇತ್ರಕ್ಕೆ ನೀಡಿದ ಕೊಡುಗೆ, ಜಾತ್ಯತೀತತೆ ಹಾಗೂ ಅವರಿಗೆ ಪಕ್ಷದ ಮೇಲಿರುವ ಅಪಾರವಾದ ನಿಷ್ಠೆ ಯನ್ನು ಪರಿಗಣಿಸಿ, ಕೊನೆಯ ಅವಕಾಶ ಎಂಬ ಸೂತ್ರದಡಿಯಲ್ಲಿ ಕಾಂಗ್ರೆಸ್ ಟಿಕೆಟ್ ದೊರಕಲಿದೆ. ಹಾಗೆ ಇನ್ನೊರ್ವ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರಿಗೂ ನೆರೆಯ ಉಡುಪಿ ಜೆಲ್ಲೆಯ ಕಾಪು ಕ್ಷೇತ್ರದಿಂದ ಕೊನೆಯ ಅವಕಾಶ ಎಂಬ ಘೋಷ ವಾಕ್ಯದಡಿ ಪಕ್ಷ ಟಿಕೆಟ್ ನೀಡಲಿದೆ ಎಂದು ವಿಶ್ವಸನೀಯ ಮೂಲಗಳು ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿವೆ. ಇನ್ನು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮೂರು ಕ್ಷೇತ್ರಗಳ ಪೈಕಿ ಒಂದಾದ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಭಾರಿ ಪೈಪೋಟಿ ಏರ್ಪಟ್ಟಿದೆ. ಮಾಜಿ ಶಾಸಕ ಜೆ. ಆರ್. ಲೋಬೊ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರ ನಡುವೆ ಟಿಕೆಟ್ ಗಾಗಿ ನೇರ ಹಣಾಹಣಿ ಏರ್ಪಟ್ಟಿದೆ. ಈ ನಡುವೆ ಕ್ರೈಸ್ತ ಸಮುದಾಯದ ಇನ್ನೋರ್ವ ಯುವ ಮುಖಂಡ ಟಿಕೆಟ್ ಗಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ ಇದೇನಿದ್ದರೂ ಲೋಬೊ ಅವರಿಗೆ ಈ ಬಾರಿ ಟಿಕೆಟ್ ಬಹುತೇಕ ಖಚಿತ ಎಂದು ತಿಳಿದು ಬಂದಿದೆ. ಲೋಬೊ ಅವರ ಮಂಗಳೂರು ಸ್ಮಾರ್ಟ್ ಸಿಟಿ ಪ್ರಸ್ತಾವನೆ ಸೇರಿದಂತೆ ಅವರು ಮಾಡಿದ ಅಭಿವೃದ್ಧಿ ಕಾರ್ಯವನ್ನು ಪರಿಗಣಿಸಿ ಕಾಂಗ್ರೆಸ್ ವರಿಷ್ಠರು ಮತ್ತೊಮ್ಮೆ ಲೋಬೊ ಅವರಿಗೆ ಅವಕಾಶ ನೀಡಲಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಆದರೆ ಇದೇನಿದ್ದರೂ ರಾಜಕೀಯದಲ್ಲಿ ಯಾವುದನ್ನೂ ಅಲ್ಲಗಳೆಯಲು ಸಾಧ್ಯವಿಲ್ಲ. ಇಂದು ಮಿತ್ರರಾಗಿದ್ದವರು ನಾಳೆ ಶತ್ರುಗಳಾಗಬಹುದು. ಹಾಗೆ ಶತ್ರುಗಳು ಮಿತ್ರರಾಗಬಹುದು. ಹಾಗಿರುವಾಗ
ಕೊನೆಯ ಹಂತದಲ್ಲಿ ಪ್ರಮುಖ ಬೆಳವಣಿಗೆ ನಡೆದರೆ ಮಾತ್ರ ಈ ಮೂವರು ಅಭ್ಯರ್ಥಿ ಗಳು ಬದಲಾಗುವ ಸಾಧ್ಯತೆ ಮಾತ್ರ ಇರುವುದು. ರಾತ್ರಿ ವೇಳೆ ಒಬ್ಬರ ಹೆಸರಿನಲ್ಲಿದ್ದ ಬಿ ಫಾರಂ ಬೆಳಗ್ಗೆ ಆಗುವಾಗ ಇನ್ನೊಬ್ಬರ ಹೆಸರಿಗೆ ಬದಲಾದ ಉದಾಹರಣೆ ಕೂಡ ರಾಜಕೀಯ ರಂಗದಲ್ಲಿ ಸಾಕಷ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು