3:06 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಮತದಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ; ಅಧಿಕಾರಿಗಳಿಗೆ ತರಬೇತಿ

06/03/2023, 23:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಸಲುವಾಗಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಉಪ ವಿಭಾಗಾಧಿಕಾರಿಗಳು ಉಪ ವಿಭಾಗ ಚಿಕ್ಕಮಗಳೂರು ಮತ್ತು ಚುನಾವಣೆ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಯಿತು.


ಈ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದ ಉಪ ವಿಭಾಗ ವಿಭಾಗಾಧಿಕಾರಿ, ರಾಜೇಶ್ ಎಚ್ ಡಿ, ಅವರು ಅಧಿಕಾರಿಗಳಿಗೆ ಇವಿಎಂ ಹೇಗೆ ಕಾರ್ಯನಿರ್ವಹಿಸುತ್ತದೆ ಹಾಗೂ ಮತದಾನದ ಸಂದರ್ಭದಲ್ಲಿ ಎದುರಾಗುವ ತೊಡಕುಗಳನ್ನು ಹೇಗೆ ಬಗೆಹರಿಸಬೇಕು ಎಂಬುದನ್ನು ಸವಿವರವಾಗಿ ವಿವರಿಸಿದರು. ನಂತರ ಮಾಸ್ಟರ್ ಟ್ರೈನರ್ ಗಳಾದ
ಶ್ರೀನಿವಾಸ್ ಹಾಗೂ ತಿಮ್ಮಪ್ಪನವರು ಇವಿಎಂನ ಪ್ರಾತ್ಯಕ್ಷಿಕೆಯನ್ನು ಅಧಿಕಾರಿಗಳಿಗೆ ನೀಡಿದರು. ಜನರಲ್ಲಿ ಇವಿಎಂ ಮೂಲಕ ಹೇಗೆ ಮತದಾನದ ಮಹತ್ವವನ್ನು ನೀಡಬೇಕೆಂಬುದನ್ನಾಗಿ ಇವಿಎಂಗಳನ್ನು ಬಳಸಿಕೊಂಡು ತರಬೇತಿ ನೀಡಲಾಯಿತು. ಈ ಸಭೆಯಲ್ಲಿ ತಹಸಿಲ್ದಾರ್ ಮತ್ತು ಸಹಾಯಕ ಚುನಾವಣೆ ಅಧಿಕಾರಿ ಮೂಡಿಗೆರೆ, ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರು ತಾಲೂಕ್ ಪಂಚಾಯಿತಿ , ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸೆಕ್ಟರ್ ಅಧಿಕಾರಿಗಳು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈವಿಎಂ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು