9:33 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಉಡುಪಿ ಕೃಷ್ಣಾಪುರ ಶ್ರೀಗಳ ಭಾವೀ ಪರ್ಯಾಯ  ಮಹೋತ್ಸವಕ್ಕೆ ಭಾರಿ ಸಿದ್ಧತೆ: ಕಟ್ಟಿಗೆ ಮುಹೂರ್ತ ಸಂಪನ್ನ

11/07/2021, 17:11

ಉಡುಪಿ(reporterkarnataka news): ಭಾವಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ನಡೆಯುವ ನಾಲ್ಕು ಪ್ರಮುಖ ವಿಧಿ ವಿಧಾನಗಳಲ್ಲೊಂದಾದ ಕಟ್ಟಿಗೆ ಮುಹೂರ್ತ ಭಾನುವಾರ ಭಕ್ತಿ ಸಡಗರದಿಂದ ಉಡುಪಿಯಲ್ಲಿ ನಡೆಯಿತು. ಅಷ್ಟ ಮಠದ ಯತಿಗಳು, ಪುರೋಹಿತರು, ವೈದಿಕರು ಉಪಸ್ಥಿತರಿದ್ದರು.

ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯ ಮಹೋತ್ಸವ ಮುಂದಿನ ವರ್ಷ ಜನವರಿ 18ರಂದು ನಡೆಯಲಿದೆ.

ಅಷ್ಟ ಮಠಗಳ ಯತಿಗಳಲ್ಲಿ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಅತ್ಯಂತ ಹಿರಿಯವರಾಗಿದ್ದಾರೆ. ಅವರ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ ಭಾನುವಾರ ನಡೆಯಿತು. ಕಟ್ಟಿಗೆಯ ರಥವನ್ನೇ ಉಡುಪಿ ಮಠದ ಪರಿಸರದಲ್ಲಿ ನಿರ್ಮಿಸಲಾಗುತ್ತದೆ.

ಕೃಷ್ಣಾಪುರ ಮಠದ ಭಾವಿ ಪರ್ಯಾಯದ ಅಂಗವಾಗಿ ಕಳೆದ ಡಿಸೆಂಬರ್ 1ರಂದು ಕೃಷ್ಣಾಪುರ ಮಠದ ಪರಿಸರದಲ್ಲಿ ಬಾಳೆ ಮುಹೂರ್ತ ನಡೆದಿತ್ತು. ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ನಡೆಯುವ ಅನ್ನದಾಸೋಹಕ್ಕೆ ಬಾಳೆ ಎಲೆ ಪೂರೈಕೆಯ ಸಂಕೇತವಾಗಿ ಬಾಳೆ ಮುಹೂರ್ತ ನಡೆಸಲಾಗುತ್ತದೆ. ಮಾರ್ಚ್ 17ರಂದು ಅಕ್ಕಿ ಮುಹೂರ್ತ ನಡೆದಿತ್ತು. ಪರ್ಯಾಯ ಮಹೋತ್ಸವಕ್ಕೆ ಬೇಕಾಗುವಷ್ಟು ಅಕ್ಕಿಯನ್ನು ಸಂಗ್ರಹಿಸಿಡುವ ಸಂಕೇತವಾಗಿ ಅಕ್ಕಿ ಮುಹೂರ್ತ ನಡೆಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು