4:40 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಉಡುಪಿ ಕೃಷ್ಣಾಪುರ ಶ್ರೀಗಳ ಭಾವೀ ಪರ್ಯಾಯ  ಮಹೋತ್ಸವಕ್ಕೆ ಭಾರಿ ಸಿದ್ಧತೆ: ಕಟ್ಟಿಗೆ ಮುಹೂರ್ತ ಸಂಪನ್ನ

11/07/2021, 17:11

ಉಡುಪಿ(reporterkarnataka news): ಭಾವಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ನಡೆಯುವ ನಾಲ್ಕು ಪ್ರಮುಖ ವಿಧಿ ವಿಧಾನಗಳಲ್ಲೊಂದಾದ ಕಟ್ಟಿಗೆ ಮುಹೂರ್ತ ಭಾನುವಾರ ಭಕ್ತಿ ಸಡಗರದಿಂದ ಉಡುಪಿಯಲ್ಲಿ ನಡೆಯಿತು. ಅಷ್ಟ ಮಠದ ಯತಿಗಳು, ಪುರೋಹಿತರು, ವೈದಿಕರು ಉಪಸ್ಥಿತರಿದ್ದರು.

ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯ ಮಹೋತ್ಸವ ಮುಂದಿನ ವರ್ಷ ಜನವರಿ 18ರಂದು ನಡೆಯಲಿದೆ.

ಅಷ್ಟ ಮಠಗಳ ಯತಿಗಳಲ್ಲಿ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಅತ್ಯಂತ ಹಿರಿಯವರಾಗಿದ್ದಾರೆ. ಅವರ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ ಭಾನುವಾರ ನಡೆಯಿತು. ಕಟ್ಟಿಗೆಯ ರಥವನ್ನೇ ಉಡುಪಿ ಮಠದ ಪರಿಸರದಲ್ಲಿ ನಿರ್ಮಿಸಲಾಗುತ್ತದೆ.

ಕೃಷ್ಣಾಪುರ ಮಠದ ಭಾವಿ ಪರ್ಯಾಯದ ಅಂಗವಾಗಿ ಕಳೆದ ಡಿಸೆಂಬರ್ 1ರಂದು ಕೃಷ್ಣಾಪುರ ಮಠದ ಪರಿಸರದಲ್ಲಿ ಬಾಳೆ ಮುಹೂರ್ತ ನಡೆದಿತ್ತು. ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ನಡೆಯುವ ಅನ್ನದಾಸೋಹಕ್ಕೆ ಬಾಳೆ ಎಲೆ ಪೂರೈಕೆಯ ಸಂಕೇತವಾಗಿ ಬಾಳೆ ಮುಹೂರ್ತ ನಡೆಸಲಾಗುತ್ತದೆ. ಮಾರ್ಚ್ 17ರಂದು ಅಕ್ಕಿ ಮುಹೂರ್ತ ನಡೆದಿತ್ತು. ಪರ್ಯಾಯ ಮಹೋತ್ಸವಕ್ಕೆ ಬೇಕಾಗುವಷ್ಟು ಅಕ್ಕಿಯನ್ನು ಸಂಗ್ರಹಿಸಿಡುವ ಸಂಕೇತವಾಗಿ ಅಕ್ಕಿ ಮುಹೂರ್ತ ನಡೆಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು