6:45 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಉಡುಪಿ ಕೃಷ್ಣಾಪುರ ಶ್ರೀಗಳ ಭಾವೀ ಪರ್ಯಾಯ  ಮಹೋತ್ಸವಕ್ಕೆ ಭಾರಿ ಸಿದ್ಧತೆ: ಕಟ್ಟಿಗೆ ಮುಹೂರ್ತ ಸಂಪನ್ನ

11/07/2021, 17:11

ಉಡುಪಿ(reporterkarnataka news): ಭಾವಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ನಡೆಯುವ ನಾಲ್ಕು ಪ್ರಮುಖ ವಿಧಿ ವಿಧಾನಗಳಲ್ಲೊಂದಾದ ಕಟ್ಟಿಗೆ ಮುಹೂರ್ತ ಭಾನುವಾರ ಭಕ್ತಿ ಸಡಗರದಿಂದ ಉಡುಪಿಯಲ್ಲಿ ನಡೆಯಿತು. ಅಷ್ಟ ಮಠದ ಯತಿಗಳು, ಪುರೋಹಿತರು, ವೈದಿಕರು ಉಪಸ್ಥಿತರಿದ್ದರು.

ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯ ಮಹೋತ್ಸವ ಮುಂದಿನ ವರ್ಷ ಜನವರಿ 18ರಂದು ನಡೆಯಲಿದೆ.

ಅಷ್ಟ ಮಠಗಳ ಯತಿಗಳಲ್ಲಿ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಅತ್ಯಂತ ಹಿರಿಯವರಾಗಿದ್ದಾರೆ. ಅವರ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ ಭಾನುವಾರ ನಡೆಯಿತು. ಕಟ್ಟಿಗೆಯ ರಥವನ್ನೇ ಉಡುಪಿ ಮಠದ ಪರಿಸರದಲ್ಲಿ ನಿರ್ಮಿಸಲಾಗುತ್ತದೆ.

ಕೃಷ್ಣಾಪುರ ಮಠದ ಭಾವಿ ಪರ್ಯಾಯದ ಅಂಗವಾಗಿ ಕಳೆದ ಡಿಸೆಂಬರ್ 1ರಂದು ಕೃಷ್ಣಾಪುರ ಮಠದ ಪರಿಸರದಲ್ಲಿ ಬಾಳೆ ಮುಹೂರ್ತ ನಡೆದಿತ್ತು. ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ನಡೆಯುವ ಅನ್ನದಾಸೋಹಕ್ಕೆ ಬಾಳೆ ಎಲೆ ಪೂರೈಕೆಯ ಸಂಕೇತವಾಗಿ ಬಾಳೆ ಮುಹೂರ್ತ ನಡೆಸಲಾಗುತ್ತದೆ. ಮಾರ್ಚ್ 17ರಂದು ಅಕ್ಕಿ ಮುಹೂರ್ತ ನಡೆದಿತ್ತು. ಪರ್ಯಾಯ ಮಹೋತ್ಸವಕ್ಕೆ ಬೇಕಾಗುವಷ್ಟು ಅಕ್ಕಿಯನ್ನು ಸಂಗ್ರಹಿಸಿಡುವ ಸಂಕೇತವಾಗಿ ಅಕ್ಕಿ ಮುಹೂರ್ತ ನಡೆಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು