3:13 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ: 3 ದಿನದಿಂದ ಹೊತ್ತಿ ಉರಿಯುತ್ತಿರುವ ಅರಣ್ಯ; ಬದುಕುಳಿಯಲು ನಾಡಿಗೆ ಬಂದ ಕಾಳಿಂಗ!!

07/03/2023, 22:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ವ್ಯಾಪ್ತಿಗೆ ಸೇರುವ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶ ಕಳೆದ ಮೂರು ದಿನಗಳಿಂದ ನಿರಂತರವಾಗಿ ಹೊತ್ತಿ ಉರಿಯುತ್ತಿದೆ. ಚಾರ್ಮಾಡಿಯ ದಟ್ಟಕಾನನದಲ್ಲಿದ್ದ ಆಶ್ರಯ ಪಡೆದುಕೊಂಡಿದ್ದ ನೂರಾರು ಪ್ರಾಣಿಪಕ್ಷಿಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿವೆ. ಆದರೆ, ಕೆಲ ಪ್ರಾಣಿಗಳು ಜೀವ ಉಳಿಸಿಕೊಳ್ಳಲು ನಾಡಿನತ್ತ ಮುಖ ಮಾಡಿವೆ.


ಮರದ ಪೊಟರೆ, ಭೂಮಿಯ ಒಳಗೆ ಹೆಚ್ಚಾಗಿ ವಾಸ ಮಾಡುವ ಕಾಳಿಂಗ ಸರ್ಪಗಳು ಮರದಲ್ಲೂ ಇರಲಾಗದೆ, ಬೆಂಕಿ ಬಿದ್ದ ಭೂಮಿಯ ತಾಪದಿಂದ ಭೂಮಿಯ ಒಳಗೂ ಇರಲಾರದೆ ನಾಡಿನತ್ತ ಮುಖ ಮಾಡಿವೆ. ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ತುರುವೆ ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಆಶ್ರಯ ಪಡೆದುಕೊಳ್ಳಲು ಜಾಗ ಹುಡುಕುತ್ತಿರುವಾಗ ಸ್ಥಳಿಯರ ಕಣ್ಣಿಗೆ ಬಿದ್ದು ಸೆರೆಯಾಗಿದೆ. ತುರುವೆ ಗ್ರಾಮದ ಸಮುದಾಯ ಭವನದ ಬಳಿ ಬಂದ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪ ಬೆಚ್ಚನೆಯ ಜಾಗ ಹುಡುಕುತ್ತಿದ್ದ ವೇಳೆ ಸ್ಥಳಿಯರ ಕಣ್ಣಿಗೆ ಬಿದ್ದಿದೆ. ದೈತ್ಯಾಕಾರದ ಕಾಳಿಂಗ ಸರ್ಪವನ್ನ ಕಂಡ ಸ್ಥಳಿಯರು ಆತಂಕದಿಂದ ಕೂಗಿದ್ದಾರೆ. ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಸುಮಾರು ಅರ್ಧ ಗಂಟೆಗಳ ಕಾರ್ಯಾಚರಣೆ ನಡೆಸಿ ದೈತ್ಯ ಕಾಳಿಂಗನನ್ನ ಸೆರಿ ಹಿಡಿದಿದ್ದಾರೆ. ಸೆರೆ ಹಿಡಿದು ಬಳಿಕ ತೀವ್ರ ನಿತ್ರಾಣಗೊಂಡಿದ್ದ ಕಾಳಿಂಗ ಸರ್ಪಕ್ಕೆ ಹಾವಾಡಿಗ ನೀರು ಕುಡಿಸಿದ್ದಾನೆ. ಈ ಕಾಳಿಂಗ ಸರ್ಪ ಎಷ್ಟು ದೈತ್ಯಾಕಾರವಿದೆ ಅಂದ್ರೆ, ಸೆರೆ ಹಿಡಿದ ಸ್ನೇಕ್ ಆರೀಫ್ ಅದನ್ನ ಎತ್ತಿಕೊಳ್ಳಲು ಕಷ್ಟಪಡಬೇಕಾದಷ್ಟು ಭಾರವಾಗಿತ್ತು ಈ ಕಾಳಿಂಗ ಸರ್ಪ. ಕೊನೆಗೆ ಸೆರೆ ಹಿಡಿದ ಕಾಳಿಂಗ ಸರ್ಪವನ್ನ ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಚಾರ್ಮಾಡಿ ಘಾಟಿಯಲ್ಲೇ ಬೆಂಕಿ ಬೀಳದ ಪ್ರದೇಶಕ್ಕೆ ಬಿಟ್ಟಿದ್ದಾರೆ. ಆದರೆ, ಚಾರ್ಮಾಡಿ ಘಾಟಿಯ ಸುತ್ತಮುತ್ತಲಿನ ಜನ ಭಯದಲ್ಲಿ ಬದುಕುವಂತಾಗಿದೆ. ಅರಣ್ಯಕ್ಕೆ ಬಿದ್ದಿರೋ ಬೆಂಕಿ ನಿಲ್ಲುವಂತೆ ಕಾಣುತ್ತಿಲ್ಲ. ಮೂರು ದಿನಗಳಿಂದ ಒಂದೇ ಸಮನೆ ಹೊತ್ತಿ ಧಗಧಗಿಸುತ್ತಿದೆ. ಈ ವೇಳೆ ಕಾಡುಪ್ರಾಣಿಗಳು ಕಾಡಂಚಿನ ಗ್ರಾಮಗಳಿಗೆ ಬಂದರೆ ಏನು ಮಾಡುವುದು, ಬದುಕುವುದು ಹೇಗೆಂದು ಜನ ಆತಂಕದಿಂದ ಬದುಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು