7:44 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ…

ಇತ್ತೀಚಿನ ಸುದ್ದಿ

Breaking | ರಿಕ್ಷಾ ಚಾಲಕನ ಮೇಲೆ ಬಸ್ ಕಂಡಕ್ಟರ್, ಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ

11/07/2021, 18:39

ಸುರತ್ಕಲ್ (reporterkarnataka.com)

ಸುರತ್ಕಲ್ ಸೂರಜ್ ಹೊಟೇಲ್ ಬಳಿ ರಿಕ್ಷಾ ಚಾಲಕನನ್ನು ಕೊಹಿನೂರ್ ಬಸ್ ನ ಕಂಡಕ್ಟರ್ , ಡ್ರೈವರ್ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆಗೈದ ಘಟನೆ ಸಂಭವಿಸಿದೆ.

ಈ ಸಂದರ್ಭ ರಿಕ್ಷಾ ಚಾಲಕ ಸುಧಾಕರ ಚೇಳಾರ್ ಗಂಭಿರ ಗಾಯಗೊಂಡಿದ್ದು, ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ಪ್ರಯಾಣಿಕರನ್ನು ಕೊಂಡೊಯ್ದರೆಂದು ಗಂಭೀರ ಹಲ್ಲೆ ಮಾಡಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸುರತ್ಕಲ್ ರಿಕ್ಷಾ ಚಾಲಕ ಮಾಲಕರ ಸಂಘಟನೆಯಿಂದಲೂ ಠಾಣೆಗೆ ದೂರು ನೀಡಲಾಗಿದೆ.
ರಿಕ್ಷಾ ಚಾಲಕ ಸುಧಾಕರ ಅವರು ಈ ಹಿಂದೆ ಚೇಳಾರು ಸಿಟಿ ಬಸ್ ನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ಈಗ ಸುರತ್ಕಲ್ ನಲ್ಲಿ ರಿಕ್ಷಾದಲ್ಲಿ ದುಡಿಯುತ್ತಿದ್ದಾರೆ. ಇಂದು ಬೆಳಿಗ್ಗೆ 8.30. ರ ಸುಮಾರಿಗೆ ಅವರು ಚೇಳಾರ್ ನಿಂದ ತನ್ನ ರಿಕ್ಷಾದಲ್ಲಿ ಸುರತ್ಕಲ್ ಗೆ ಬರುತ್ತಿದ್ದರು. ತಡಂಬೈಲ್ ಬಳಿ ಪ್ರಯಾಣಿಕರನ್ನು ಪಿಕಪ್ ಮಾಡಿ ಸುರತ್ಕಲ್ ಗೆ ಬರುತ್ತಿದ್ದಾಗ ಅತೀ ವೇಗವಾಗಿ ಬಂದ ಕೊಹಿನೂರು ಸರ್ವೀಸ್ ಬಸ್ ಸೂರಜ್ ಬಳಿ ರಿಕ್ಷಾ ಚಾಲಕನನ್ನು ಅಡ್ಡಗಟ್ಟಿ ಬಸ್ ನ ಕಂಡಕ್ಟರ್ ಮತ್ತು ಡ್ರೈವರ್, ಹಲ್ಲೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು